<p><strong>ಬೆಂಗಳೂರು: </strong>ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಾಲ್ಕು ನಿಗಮಗಳ ಕಾರ್ಮಿಕ ಒಕ್ಕೂಟಗಳ ಪ್ರಮುಖರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಕೋವಿಡ್ನಿಂದ 50ಕ್ಕೂ ಹೆಚ್ಚು ನೌಕರರು ಸಾವಿಗೀಡಾಗಿದ್ದಾರೆ. ಬಹಳಷ್ಟು ನೌಕರರಿಗೆ ಪೂರ್ಣ ವೇತನ ನೀಡುತ್ತಿಲ್ಲ. ಲಾಕ್ಡೌನ್ ಮುನ್ನ ಮತ್ತು ನಂತರ ಅಧಿಕಾರಿಗಳು ನೌಕರರಿಗೆ ಹಲವು ರೀತಿಯ ದೌರ್ಜನ್ಯ ನೀಡುತ್ತಿದ್ದಾರೆ’ ಎಂದು ಫೆಡರೇಷನ್ನ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಮಂಜುನಾಥ್ ಆರೋಪಿಸಿದರು.</p>.<p>‘ನೌಕರರಿಗೆ ₹2000, ₹3000 ಮಾತ್ರ ವೇತನ ನೀಡಲಾಗುತ್ತಿದೆ. ಸೋಂಕು ಹರಡುತ್ತಿದ್ದರೂ ಪ್ರಾಣ ಒತ್ತೆ ಇಟ್ಟು ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೂ ವೇತನ ಕಡಿತ, ಕೆಲಸದಿಂದ ತೆಗೆಯುವಂತಹ ಕಾರ್ಯವನ್ನು ಸರ್ಕಾರ ಮಾಡುತ್ತಿದೆ’ ಎಂದು ದೂರಿದರು.</p>.<p>‘70 ವರ್ಷಗಳಿಂದ ತೆರಿಗೆ ರೂಪದಲ್ಲಿ ಈ ನಿಗಮಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟಲಾಗಿದೆ. ಈ ಸಂಕಷ್ಟದ ಸಮಯದಲ್ಲಿ ನೌಕರರಿಗೆ ಪೂರ್ಣವೇತನ ನೀಡಬೇಕು. ಕೊರೊನಾದಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಒಂದೇ ಪಾಳಿಯಲ್ಲಿ ಸತತ 12 ತಾಸು ಕೆಲಸ ಮಾಡಬೇಕಾಗಿರುವುದರಿಂದ ಮಹಿಳಾ ಸಿಬ್ಬಂದಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಮೊದಲಿನಂತೆ ಬೆಳಿಗ್ಗೆ 6ರಿಂದ 2 ಮತ್ತು 2ರಿಂದ ರಾತ್ರಿ 10ರವರೆಗೆ ಎರಡು ಪಾಳಿ ಮಾಡಬೇಕು. ಬಸ್ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಿದ್ದಕ್ಕೆ ಬಹಳಷ್ಟು ನಿರ್ವಾಹಕರನ್ನು ಅಮಾನವೀಯವಾಗಿ ಅಮಾನತು ಮಾಡಲಾಗಿದೆ. ಇದನ್ನು ವಾಪಸ್ ಪಡೆಯಬೇಕು’ ಎಂದು ನೌಕರರು ಆಗ್ರಹಿಸಿದರು.</p>.<p>‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾರ್ಮಿಕ ಒಕ್ಕೂಟಗಳ ಜೊತೆ ಮಾತುಕತೆ ನಡೆಸಿಯೇ ಇಲ್ಲ. ಕೂಡಲೇ ಮಾತುಕತೆಗೆ ಆಹ್ವಾನಿಸಿ, ನಮ್ಮ ಅಹವಾಲುಗಳನ್ನು ಆಲಿಸಬೇಕು’ ಎಂದರು.</p>.<p>ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ, ಉಪಾಧ್ಯಕ್ಷ ಡಾ. ಕೆ. ಪ್ರಕಾಶ್, ಜಂಟಿ ಕಾರ್ಯದರ್ಶಿ ಆನಂದ ಇದ್ದರು.</p>.<p><strong>ಇತರೆ ಬೇಡಿಕೆಗಳು</strong></p>.<p>lಕಾರ್ಮಿಕರ ಗಳಿಕೆ ರಜೆಗಳನ್ನು ವಾಪಸ್ ಅವರ ಖಾತೆಗೆ ನೀಡಬೇಕು</p>.<p>lಕ್ವಾರಂಟೈನ್ ಆದ ಅವಧಿ ಮತ್ತು ಚಿಕಿತ್ಸೆ ಪಡೆದ ಅವಧಿಯಲ್ಲಿ ವೇತನ ಸಹಿತ ರಜೆ ನೀಡಬೇಕು</p>.<p>lಬಿಎಂಟಿಸಿಯಲ್ಲಿ ಪಾಳಿಯಲ್ಲಿ ಮಾರ್ಗ ಕಾರ್ಯಾಚರಣೆ ನಡೆಸಬೇಕು</p>.<p>lನಿಗಮದಿಂದ ನಿಗಮಕ್ಕೆ ವರ್ಗಾವಣೆ ಮಾಡಬೇಕು</p>.<p>lಸರ್ಕಾರಗಳು ನಿಗಮಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು</p>.<p>lನಿಗಮಗಳಿಗೆ ನೀಡಬೇಕಾದ ಬಾಕಿ ಹಣವನ್ನು ಸರ್ಕಾರ ಕೂಡಲೇ ನೀಡಬೇಕು</p>.<p>lನಿಗಮದ ಒಡೆತನದಲ್ಲಿಯೇ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆ ಮಾಡಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಾಲ್ಕು ನಿಗಮಗಳ ಕಾರ್ಮಿಕ ಒಕ್ಕೂಟಗಳ ಪ್ರಮುಖರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಕೋವಿಡ್ನಿಂದ 50ಕ್ಕೂ ಹೆಚ್ಚು ನೌಕರರು ಸಾವಿಗೀಡಾಗಿದ್ದಾರೆ. ಬಹಳಷ್ಟು ನೌಕರರಿಗೆ ಪೂರ್ಣ ವೇತನ ನೀಡುತ್ತಿಲ್ಲ. ಲಾಕ್ಡೌನ್ ಮುನ್ನ ಮತ್ತು ನಂತರ ಅಧಿಕಾರಿಗಳು ನೌಕರರಿಗೆ ಹಲವು ರೀತಿಯ ದೌರ್ಜನ್ಯ ನೀಡುತ್ತಿದ್ದಾರೆ’ ಎಂದು ಫೆಡರೇಷನ್ನ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಮಂಜುನಾಥ್ ಆರೋಪಿಸಿದರು.</p>.<p>‘ನೌಕರರಿಗೆ ₹2000, ₹3000 ಮಾತ್ರ ವೇತನ ನೀಡಲಾಗುತ್ತಿದೆ. ಸೋಂಕು ಹರಡುತ್ತಿದ್ದರೂ ಪ್ರಾಣ ಒತ್ತೆ ಇಟ್ಟು ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೂ ವೇತನ ಕಡಿತ, ಕೆಲಸದಿಂದ ತೆಗೆಯುವಂತಹ ಕಾರ್ಯವನ್ನು ಸರ್ಕಾರ ಮಾಡುತ್ತಿದೆ’ ಎಂದು ದೂರಿದರು.</p>.<p>‘70 ವರ್ಷಗಳಿಂದ ತೆರಿಗೆ ರೂಪದಲ್ಲಿ ಈ ನಿಗಮಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟಲಾಗಿದೆ. ಈ ಸಂಕಷ್ಟದ ಸಮಯದಲ್ಲಿ ನೌಕರರಿಗೆ ಪೂರ್ಣವೇತನ ನೀಡಬೇಕು. ಕೊರೊನಾದಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಒಂದೇ ಪಾಳಿಯಲ್ಲಿ ಸತತ 12 ತಾಸು ಕೆಲಸ ಮಾಡಬೇಕಾಗಿರುವುದರಿಂದ ಮಹಿಳಾ ಸಿಬ್ಬಂದಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಮೊದಲಿನಂತೆ ಬೆಳಿಗ್ಗೆ 6ರಿಂದ 2 ಮತ್ತು 2ರಿಂದ ರಾತ್ರಿ 10ರವರೆಗೆ ಎರಡು ಪಾಳಿ ಮಾಡಬೇಕು. ಬಸ್ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಿದ್ದಕ್ಕೆ ಬಹಳಷ್ಟು ನಿರ್ವಾಹಕರನ್ನು ಅಮಾನವೀಯವಾಗಿ ಅಮಾನತು ಮಾಡಲಾಗಿದೆ. ಇದನ್ನು ವಾಪಸ್ ಪಡೆಯಬೇಕು’ ಎಂದು ನೌಕರರು ಆಗ್ರಹಿಸಿದರು.</p>.<p>‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾರ್ಮಿಕ ಒಕ್ಕೂಟಗಳ ಜೊತೆ ಮಾತುಕತೆ ನಡೆಸಿಯೇ ಇಲ್ಲ. ಕೂಡಲೇ ಮಾತುಕತೆಗೆ ಆಹ್ವಾನಿಸಿ, ನಮ್ಮ ಅಹವಾಲುಗಳನ್ನು ಆಲಿಸಬೇಕು’ ಎಂದರು.</p>.<p>ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ, ಉಪಾಧ್ಯಕ್ಷ ಡಾ. ಕೆ. ಪ್ರಕಾಶ್, ಜಂಟಿ ಕಾರ್ಯದರ್ಶಿ ಆನಂದ ಇದ್ದರು.</p>.<p><strong>ಇತರೆ ಬೇಡಿಕೆಗಳು</strong></p>.<p>lಕಾರ್ಮಿಕರ ಗಳಿಕೆ ರಜೆಗಳನ್ನು ವಾಪಸ್ ಅವರ ಖಾತೆಗೆ ನೀಡಬೇಕು</p>.<p>lಕ್ವಾರಂಟೈನ್ ಆದ ಅವಧಿ ಮತ್ತು ಚಿಕಿತ್ಸೆ ಪಡೆದ ಅವಧಿಯಲ್ಲಿ ವೇತನ ಸಹಿತ ರಜೆ ನೀಡಬೇಕು</p>.<p>lಬಿಎಂಟಿಸಿಯಲ್ಲಿ ಪಾಳಿಯಲ್ಲಿ ಮಾರ್ಗ ಕಾರ್ಯಾಚರಣೆ ನಡೆಸಬೇಕು</p>.<p>lನಿಗಮದಿಂದ ನಿಗಮಕ್ಕೆ ವರ್ಗಾವಣೆ ಮಾಡಬೇಕು</p>.<p>lಸರ್ಕಾರಗಳು ನಿಗಮಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು</p>.<p>lನಿಗಮಗಳಿಗೆ ನೀಡಬೇಕಾದ ಬಾಕಿ ಹಣವನ್ನು ಸರ್ಕಾರ ಕೂಡಲೇ ನೀಡಬೇಕು</p>.<p>lನಿಗಮದ ಒಡೆತನದಲ್ಲಿಯೇ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆ ಮಾಡಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>