ಶೇ 15ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಇದನ್ನು ಒಪ್ಪಿಕೊಂಡಿರುವ ಜಂಟಿ ಕ್ರಿಯಾಸಮಿತಿ, ಮಾರ್ಚ್ 21ರಿಂದ ನಡೆಸಲು ಉದ್ದೇಶಿಸಿದ್ದ ಮುಷ್ಕರ ಕೈಬಿಟ್ಟಿದೆ. ಸಮಿತಿಯ ನೇತೃತ್ವ ವಹಿಸಿದ್ದ ಎಚ್.ವಿ.ಅನಂತಸುಬ್ಬರಾವ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.