ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಂ ಶಕ್ತಿ ದೇವಸ್ಥಾನಕ್ಕೆ ಬಸ್ ಸೌಲಭ್ಯ

Last Updated 19 ಡಿಸೆಂಬರ್ 2019, 19:56 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿನ ಮೇಲ್‌ಮರವತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಒದಗಿಸಲಿದೆ.

ಭಕ್ತಾದಿಗಳ ಅನುಕೂಲಕ್ಕಾಗಿ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ (ಮೊ.ಸಂ.7760990535), ಮೈಸೂರು ರಸ್ತೆ ಬಸ್ ನಿಲ್ದಾಣದ ಘಟಕ-5 ಮತ್ತು 6ರಲ್ಲಿ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ.

‘ಕರ್ನಾಟಕ ಸಾರಿಗೆ ಮಾದರಿಯ 55 ಸೀಟುಗಳ ಬಸ್‌ಗಳಿಗೆ ಪ್ರತಿ ಕಿಲೋ ಮೀಟರ್‌ಗೆ ₹ 41 ಹಾಗೂ ಅಂತರರಾಜ್ಯ ಪರ್ಮಿಟ್ ದರಗಳು ಅನ್ವಯವಾಗುತ್ತವೆ. ಇತರ ನಗರಗಳಿಂದಲೂ ಬಸ್ ನಿಲ್ದಾಣ ಮತ್ತು ಘಟಕಗಳನ್ನು ಸಂಪರ್ಕಿಸಿದರೆ ಬಸ್‌ಗಳನ್ನು ಒದಗಿಸಲಾಗುವುದು’ ಎಂದು ನಿಗಮ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT