ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ, ‘ರಾಜ್ಯದಲ್ಲಿ ಈ ವರ್ಷ ಬಳ್ಳಾರಿ, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಟ್ರಾಮಾ ಘಟಕವನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.ಟ್ರಾಮಾ ಕೋರ್ಸ್ಗೆ ವಿಶ್ವವಿದ್ಯಾಲಯದಲ್ಲಿ ಕೂಡಾ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈ ಚಿಕಿತ್ಸೆ ರಾಜ್ಯದ ಎಲ್ಲೆಡೆ ಸಿಗುವಂತಾಗಬೇಕು’ ಎಂದು ಹೇಳಿದರು.