ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಸದಸ್ಯೆ ಗೀತಾ ಎಂ., ‘ಲೈಂಗಿಕ ಕಾರ್ಮಿಕರ ಘನತೆಯ ಹಕ್ಕು, ಪೊಲೀಸ್ ಹಿಂಸಾಚಾರದ ವಿರುದ್ಧ ಅವರ ಹಕ್ಕು ಮತ್ತು ಇತರೆ ಪ್ರಮುಖ ಸಾಂವಿಧಾನಿಕ ಖಾತರಿಗಳನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ವೇಶ್ಯಾವಾಟಿಕೆಯೂ ಒಂದು ವೃತ್ತಿ ಮತ್ತು ಲೈಂಗಿಕ ಕಾರ್ಯಕರ್ತೆಯರು ಕೂಡ ಕಾನೂನಿನ ಅಡಿಯಲ್ಲಿ ಘನತೆಯಿಂದ ಬದುಕಲು ಹಾಗೂ ಸಮಾನ ರಕ್ಷಣೆಯನ್ನು ಪಡೆಯಲು ಅರ್ಹರು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ರಾಜ್ಯ ಸರ್ಕಾರಗಳು ಕಾರ್ಯರೂಪಕ್ಕೆ ತರಬೇಕು’ ಎಂದು ಆಗ್ರಹಿಸಿದರು.