<p><strong>ಬೆಂಗಳೂರು:</strong> ‘ಕೋವಿಡ್ ರೋಗಿಗಳು ಹಾಗೂ ಸೋಂಕು ಶಂಕಿತರಿಗೆ ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡುವಂತೆ ಆರೋಗ್ಯ ಕ್ಷೇತ್ರದ ತಜ್ಞರು ಹಾಗೂ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಬಗ್ಗೆ ಕಾರ್ಯಪಡೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀವ್ಗಾಂಧಿ ಎದೆರೋಗಗಳ ಆಸ್ಪತ್ರೆ, ಜಯನಗರದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ನಿರ್ಮಿಸಿ, ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ಈ ರೀತಿವಿವಿಧ ಆಸ್ಪತ್ರೆಗಳಲ್ಲಿ ಅವರನ್ನು ದಾಖಲಿಸಿಕೊಂಡಲ್ಲಿ ಚಿಕಿತ್ಸೆಗೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಹಾಗಾಗಿ ಯಾವುದಾದರೂ ಒಂದು ಆಸ್ಪತ್ರೆಯನ್ನು ಮೀಸಲಿಡಬೇಕು ಎಂಬ ಸಲಹೆಗಳು ಬಂದಿವೆ’ ಎಂದು ಹೇಳಿದರು.</p>.<p>‘2 ಸಾವಿರ ಹಾಸಿಗೆಗಳ ಸಾಮರ್ಥ್ಯದ ವಿಕ್ಟೋರಿಯಾ ಆಸ್ಪತ್ರೆಯನ್ನು ಚಿಕಿತ್ಸೆಗೆ ಮೀಸಲಿಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಅಲ್ಲಿ 10 ಸಾವಿರ ಮಂದಿಗೂ ಚಿಕಿತ್ಸೆ ಒದಗಿಸಲು ಸಾಧ್ಯ.ಕೆ.ಸಿ.ಜನರಲ್ ಹಾಗೂ ಜಯನಗರ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ 400 ಹಾಸಿಗೆಗಳು ಲಭ್ಯವಿದೆ. ಕಿಮ್ಸ್ ಆಸ್ಪತ್ರೆಯಲ್ಲಿ 1 ಸಾವಿರ ಹಾಸಿಗೆಗಳು ಸಿಗಲಿವೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು’ ಎಂದು ತಿಳಿಸಿದರು.</p>.<p class="Subhead"><strong>ಚಿಕಿತ್ಸೆ ಮುಂದೂಡಲು ಮನವಿ</strong></p>.<p class="Subhead">ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ತಕ್ಷಣಕ್ಕೆ ಅಗತ್ಯವಿಲ್ಲದ ಚಿಕಿತ್ಸೆಗಳನ್ನು ಮುಂದೂಡುವಂತೆರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ನಿಮ್ಹಾನ್ಸ್) ಮನವಿ ಮಾಡಿಕೊಂಡಿದೆ.</p>.<p>ಸಂಸ್ಥೆಯ ನಿರ್ದೇಶಕ ನಿರ್ದೇಶಕ ಡಾ.ಬಿ.ಎನ್. ಗಂಗಾಧರ್,‘ವೃದ್ಧರು ಮತ್ತು ಮಕ್ಕಳು ಈ ಸೋಂಕಿನಿಂದ ಹೆಚ್ಚು ಘಾಸಿಗೊಳ್ಳುತ್ತಾರೆ. ಅವರು ಮನೆಯಿಂದ ಹೊರಗಡೆ ಬರುವುದನ್ನು ಕಡಿಮೆ ಮಾಡಬೇಕು. ಗಂಭೀರವಲ್ಲದ ಕಾಯಿಲೆಗಳಿಂದ ಬಳಲುತ್ತಿರುವವರು ಚಿಕಿತ್ಸೆಯನ್ನು ಮುಂದೂಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><strong>ಹೊಸ ಪ್ರಕರಣ ವರದಿಯಾಗಿಲ್ಲ</strong></p>.<p>ಶುಕ್ರವಾರ 55 ಮಂದಿಯ ವೈದ್ಯಕೀಯ ಪರೀಕ್ಷಾ ವರದಿಗಳು ಬಂದಿದ್ದು, ಅವರಲ್ಲಿ ಯಾರಿಗೂ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ. ಆದರೆ, ಸೋಂಕು ಶಂಕೆ ಹಿನ್ನೆಲೆಯಲ್ಲಿ 27 ಮಂದಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.</p>.<p><strong>ನಿಯಂತ್ರಣಕ್ಕೆ ವಾರ ಕಾಲಾವಕಾಶ</strong></p>.<p>ಕೊರೊನಾ ಸೋಂಕು ನಾಲ್ಕು ಹಂತದಲ್ಲಿ ಹರಡಲಿದೆ. ಸದ್ಯ ಎರಡನೇ ಹಂತದಲ್ಲಿದ್ದು, ವಿದೇಶಗಳಿಂದ ಬಂದ ವ್ಯಕ್ತಿಗಳಿಂದ ಕುಟುಂಬದ ಸದಸ್ಯರಿಗೆ, ಸ್ನೇಹಿತರಿಗೆ ಹಾಗೂ ಸಹೋದ್ಯೋಗಿಗಳಿಗೆ ಹರಡುತ್ತಿದೆ. ಮೂರನೇ ಹಂತದಲ್ಲಿ ಸಮುದಾಯದಲ್ಲಿ ಹರಡಲಿದೆ. ಈ ಹಂತ ತಲುಪುವುದನ್ನು ತಡೆಯಲು ಒಂದು ವಾರ ಕಾಲಾವಕಾಶವಿದೆ.</p>.<p>‘ನಾವು ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳು ಸಮುದಾಯಕ್ಕೆ ಹರಡುವುದನ್ನು ತಡೆಯುವಲ್ಲಿ ಸಹಕಾರಿಯಾಗಲಿದೆ. ಮುಂದಿನ ಒಂದು ವಾರ ನಿರ್ಣಾಯಕವಾಗಿದೆ. ಹೊಸದಾಗಿ ಪ್ರಕರಣಗಳು ವರದಿಯಾಗದಿದ್ದಲ್ಲಿ ಎರಡನೇ ಹಂತದಲ್ಲಿಯೇ ಇರುತ್ತೇವೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಬಿ.ಜಿ.ಪ್ರಕಾಶ್ ಕುಮಾರ್ ತಿಳಿಸಿದರು.</p>.<p><strong>ಇಂದಿನಿಂದ ಲಾಲ್ಬಾಗ್ ಪ್ರವೇಶ ರದ್ದು</strong></p>.<p>ಇದೇ 21ರಿಂದ ಲಾಲ್ಬಾಗ್ ಉದ್ಯಾನಕ್ಕೆ ವಾಯುವಿಹಾರಿಗಳು ಹಾಗೂ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.</p>.<p>‘ಉದ್ಯಾನಕ್ಕೆ ನಿತ್ಯ 7ರಿಂದ 10 ಸಾವಿರ ಮಂದಿ ಭೇಟಿ ನೀಡುತ್ತಾರೆ. ಹೆಚ್ಚು ಜನ ಸೇರುವ ಜಾಗದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆಯಿರುವುದರಿಂದ ಈ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರ ರಾತ್ರಿಯಿಂದಲೇ ಉದ್ಯಾನದ ಎಲ್ಲ ಪ್ರವೇಶದ್ವಾರಗಳನ್ನು ಮುಚ್ಚಲಾಗಿದೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ.ಜಗದೀಶ್ ತಿಳಿಸಿದರು. ಕಬ್ಬನ್ ಉದ್ಯಾನ ಕೂಡ<br />ಬಂದ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.</p>.<p><strong>ಆರೋಗ್ಯ ವ್ಯವಸ್ಥೆಯ ಮೇಲೆ ಒತ್ತಡ</strong></p>.<p>ಶೇ 85 ರಷ್ಟು ಮಂದಿಗೆ ಈ ಸೋಂಕು ಏನು ಮಾಡುವುದಿಲ್ಲ. ಎಲ್ಲರೂ ಪರೀಕ್ಷೆಯನ್ನು ಬಯಸಿದರೆ ಆರೋಗ್ಯ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗುತ್ತದೆ ಎಂದು ನಾರಾಯಣ ಹೃದಯಾಲಯದಡಾ. ದೇವಿ ಪ್ರಸಾದ್ ಶೆಟ್ಟಿ ಹೇಳಿದರು.</p>.<p>ಸೋಂಕು ಪ್ರಕರಣ ವರದಿಯಾದ ದೇಶಗಳಿಂದ ಬಂದವರು ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು. ಸೋಂಕು ಹರಡುವಿಕೆ ತಡೆಯಲು ಸಾರ್ವಜನಿಕರ ಸಹಕರಿಸಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಮನವಿ ಮಾಡಿದರು.</p>.<p><strong>ಬಸ್ ಸಂಚಾರ ಸಂಪೂರ್ಣ ಬಂದ್ ಸಾಧ್ಯತೆ</strong></p>.<p>ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಜನತಾ ಕರ್ಫ್ಯೂ’ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇದೇ 22ರಂದು ಕೆಎಸ್ಆರ್ಟಿಸಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.</p>.<p>‘ಅಗತ್ಯವಿದ್ದಲ್ಲಿ ಮಾತ್ರ ಅಂದು ಬೆಳಿಗ್ಗೆಯಿಂದ ರಾತ್ರಿ 9 ಗಂಟೆ ತನಕ ಬಸ್ ಸೇವೆ ಒದಗಿಸಲಾಗುವುದು’ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ.</p>.<p>‘21ರಂದು ರಾತ್ರಿ ತಂಗುವ ಮಾರ್ಗದ ಬಸ್ಗಳನ್ನು ಹತ್ತಿರದ ಘಟಕಗಳಿಗೆ ತೆರಳಲು ಸೂಚಿಸಲಾಗಿದೆ. 22ರ ರಾತ್ರಿ 9 ಗಂಟೆಯ ನಂತರ ರಾತ್ರಿ ಸೇವೆಯ ಬಸ್ಗಳಿಗೆ ಮುಂಗಡ ಕಾಯ್ದಿರಿಸಿದಲ್ಲಿ ಮಾತ್ರ ಬಸ್ಗಳ ಕಾರ್ಯಾಚರಣೆ ಮಾಡಲಾಗುವುದು. ಜನ ಸಂದಣೆ ಇದ್ದರೂ ಕಾರ್ಯಾಚರಣೆ ಮಾಡಲಾಗುವುದು’ ಎಂದು ತಿಳಿಸಿದೆ.</p>.<p>ಕೋವಿಡ್ –19 ಭೀತಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವ ಕಾರಣ ಶುಕ್ರವಾರವೂ ಕೆಎಸ್ಆರ್ಟಿಸಿ, 1,385 ಮಾರ್ಗಗಳ ಸಂಚಾರವನ್ನು ರದ್ದು ಮಾಡಿದೆ. ನಿಗಮದ ವರಮಾನದಲ್ಲಿ ಮಾ.1ರಿಂದ ಈವರೆಗೆ ₹10.58 ಖೋತಾ ಆಗಿದೆ. ಒಟ್ಟು 49,216 ಮಂದಿ ಪ್ರಯಾಣ ರದ್ದು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ ರೋಗಿಗಳು ಹಾಗೂ ಸೋಂಕು ಶಂಕಿತರಿಗೆ ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡುವಂತೆ ಆರೋಗ್ಯ ಕ್ಷೇತ್ರದ ತಜ್ಞರು ಹಾಗೂ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಬಗ್ಗೆ ಕಾರ್ಯಪಡೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀವ್ಗಾಂಧಿ ಎದೆರೋಗಗಳ ಆಸ್ಪತ್ರೆ, ಜಯನಗರದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ನಿರ್ಮಿಸಿ, ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ಈ ರೀತಿವಿವಿಧ ಆಸ್ಪತ್ರೆಗಳಲ್ಲಿ ಅವರನ್ನು ದಾಖಲಿಸಿಕೊಂಡಲ್ಲಿ ಚಿಕಿತ್ಸೆಗೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಹಾಗಾಗಿ ಯಾವುದಾದರೂ ಒಂದು ಆಸ್ಪತ್ರೆಯನ್ನು ಮೀಸಲಿಡಬೇಕು ಎಂಬ ಸಲಹೆಗಳು ಬಂದಿವೆ’ ಎಂದು ಹೇಳಿದರು.</p>.<p>‘2 ಸಾವಿರ ಹಾಸಿಗೆಗಳ ಸಾಮರ್ಥ್ಯದ ವಿಕ್ಟೋರಿಯಾ ಆಸ್ಪತ್ರೆಯನ್ನು ಚಿಕಿತ್ಸೆಗೆ ಮೀಸಲಿಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಅಲ್ಲಿ 10 ಸಾವಿರ ಮಂದಿಗೂ ಚಿಕಿತ್ಸೆ ಒದಗಿಸಲು ಸಾಧ್ಯ.ಕೆ.ಸಿ.ಜನರಲ್ ಹಾಗೂ ಜಯನಗರ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ 400 ಹಾಸಿಗೆಗಳು ಲಭ್ಯವಿದೆ. ಕಿಮ್ಸ್ ಆಸ್ಪತ್ರೆಯಲ್ಲಿ 1 ಸಾವಿರ ಹಾಸಿಗೆಗಳು ಸಿಗಲಿವೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು’ ಎಂದು ತಿಳಿಸಿದರು.</p>.<p class="Subhead"><strong>ಚಿಕಿತ್ಸೆ ಮುಂದೂಡಲು ಮನವಿ</strong></p>.<p class="Subhead">ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ತಕ್ಷಣಕ್ಕೆ ಅಗತ್ಯವಿಲ್ಲದ ಚಿಕಿತ್ಸೆಗಳನ್ನು ಮುಂದೂಡುವಂತೆರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ನಿಮ್ಹಾನ್ಸ್) ಮನವಿ ಮಾಡಿಕೊಂಡಿದೆ.</p>.<p>ಸಂಸ್ಥೆಯ ನಿರ್ದೇಶಕ ನಿರ್ದೇಶಕ ಡಾ.ಬಿ.ಎನ್. ಗಂಗಾಧರ್,‘ವೃದ್ಧರು ಮತ್ತು ಮಕ್ಕಳು ಈ ಸೋಂಕಿನಿಂದ ಹೆಚ್ಚು ಘಾಸಿಗೊಳ್ಳುತ್ತಾರೆ. ಅವರು ಮನೆಯಿಂದ ಹೊರಗಡೆ ಬರುವುದನ್ನು ಕಡಿಮೆ ಮಾಡಬೇಕು. ಗಂಭೀರವಲ್ಲದ ಕಾಯಿಲೆಗಳಿಂದ ಬಳಲುತ್ತಿರುವವರು ಚಿಕಿತ್ಸೆಯನ್ನು ಮುಂದೂಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><strong>ಹೊಸ ಪ್ರಕರಣ ವರದಿಯಾಗಿಲ್ಲ</strong></p>.<p>ಶುಕ್ರವಾರ 55 ಮಂದಿಯ ವೈದ್ಯಕೀಯ ಪರೀಕ್ಷಾ ವರದಿಗಳು ಬಂದಿದ್ದು, ಅವರಲ್ಲಿ ಯಾರಿಗೂ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ. ಆದರೆ, ಸೋಂಕು ಶಂಕೆ ಹಿನ್ನೆಲೆಯಲ್ಲಿ 27 ಮಂದಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.</p>.<p><strong>ನಿಯಂತ್ರಣಕ್ಕೆ ವಾರ ಕಾಲಾವಕಾಶ</strong></p>.<p>ಕೊರೊನಾ ಸೋಂಕು ನಾಲ್ಕು ಹಂತದಲ್ಲಿ ಹರಡಲಿದೆ. ಸದ್ಯ ಎರಡನೇ ಹಂತದಲ್ಲಿದ್ದು, ವಿದೇಶಗಳಿಂದ ಬಂದ ವ್ಯಕ್ತಿಗಳಿಂದ ಕುಟುಂಬದ ಸದಸ್ಯರಿಗೆ, ಸ್ನೇಹಿತರಿಗೆ ಹಾಗೂ ಸಹೋದ್ಯೋಗಿಗಳಿಗೆ ಹರಡುತ್ತಿದೆ. ಮೂರನೇ ಹಂತದಲ್ಲಿ ಸಮುದಾಯದಲ್ಲಿ ಹರಡಲಿದೆ. ಈ ಹಂತ ತಲುಪುವುದನ್ನು ತಡೆಯಲು ಒಂದು ವಾರ ಕಾಲಾವಕಾಶವಿದೆ.</p>.<p>‘ನಾವು ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳು ಸಮುದಾಯಕ್ಕೆ ಹರಡುವುದನ್ನು ತಡೆಯುವಲ್ಲಿ ಸಹಕಾರಿಯಾಗಲಿದೆ. ಮುಂದಿನ ಒಂದು ವಾರ ನಿರ್ಣಾಯಕವಾಗಿದೆ. ಹೊಸದಾಗಿ ಪ್ರಕರಣಗಳು ವರದಿಯಾಗದಿದ್ದಲ್ಲಿ ಎರಡನೇ ಹಂತದಲ್ಲಿಯೇ ಇರುತ್ತೇವೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಬಿ.ಜಿ.ಪ್ರಕಾಶ್ ಕುಮಾರ್ ತಿಳಿಸಿದರು.</p>.<p><strong>ಇಂದಿನಿಂದ ಲಾಲ್ಬಾಗ್ ಪ್ರವೇಶ ರದ್ದು</strong></p>.<p>ಇದೇ 21ರಿಂದ ಲಾಲ್ಬಾಗ್ ಉದ್ಯಾನಕ್ಕೆ ವಾಯುವಿಹಾರಿಗಳು ಹಾಗೂ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.</p>.<p>‘ಉದ್ಯಾನಕ್ಕೆ ನಿತ್ಯ 7ರಿಂದ 10 ಸಾವಿರ ಮಂದಿ ಭೇಟಿ ನೀಡುತ್ತಾರೆ. ಹೆಚ್ಚು ಜನ ಸೇರುವ ಜಾಗದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆಯಿರುವುದರಿಂದ ಈ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರ ರಾತ್ರಿಯಿಂದಲೇ ಉದ್ಯಾನದ ಎಲ್ಲ ಪ್ರವೇಶದ್ವಾರಗಳನ್ನು ಮುಚ್ಚಲಾಗಿದೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ.ಜಗದೀಶ್ ತಿಳಿಸಿದರು. ಕಬ್ಬನ್ ಉದ್ಯಾನ ಕೂಡ<br />ಬಂದ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.</p>.<p><strong>ಆರೋಗ್ಯ ವ್ಯವಸ್ಥೆಯ ಮೇಲೆ ಒತ್ತಡ</strong></p>.<p>ಶೇ 85 ರಷ್ಟು ಮಂದಿಗೆ ಈ ಸೋಂಕು ಏನು ಮಾಡುವುದಿಲ್ಲ. ಎಲ್ಲರೂ ಪರೀಕ್ಷೆಯನ್ನು ಬಯಸಿದರೆ ಆರೋಗ್ಯ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗುತ್ತದೆ ಎಂದು ನಾರಾಯಣ ಹೃದಯಾಲಯದಡಾ. ದೇವಿ ಪ್ರಸಾದ್ ಶೆಟ್ಟಿ ಹೇಳಿದರು.</p>.<p>ಸೋಂಕು ಪ್ರಕರಣ ವರದಿಯಾದ ದೇಶಗಳಿಂದ ಬಂದವರು ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು. ಸೋಂಕು ಹರಡುವಿಕೆ ತಡೆಯಲು ಸಾರ್ವಜನಿಕರ ಸಹಕರಿಸಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಮನವಿ ಮಾಡಿದರು.</p>.<p><strong>ಬಸ್ ಸಂಚಾರ ಸಂಪೂರ್ಣ ಬಂದ್ ಸಾಧ್ಯತೆ</strong></p>.<p>ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಜನತಾ ಕರ್ಫ್ಯೂ’ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇದೇ 22ರಂದು ಕೆಎಸ್ಆರ್ಟಿಸಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.</p>.<p>‘ಅಗತ್ಯವಿದ್ದಲ್ಲಿ ಮಾತ್ರ ಅಂದು ಬೆಳಿಗ್ಗೆಯಿಂದ ರಾತ್ರಿ 9 ಗಂಟೆ ತನಕ ಬಸ್ ಸೇವೆ ಒದಗಿಸಲಾಗುವುದು’ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ.</p>.<p>‘21ರಂದು ರಾತ್ರಿ ತಂಗುವ ಮಾರ್ಗದ ಬಸ್ಗಳನ್ನು ಹತ್ತಿರದ ಘಟಕಗಳಿಗೆ ತೆರಳಲು ಸೂಚಿಸಲಾಗಿದೆ. 22ರ ರಾತ್ರಿ 9 ಗಂಟೆಯ ನಂತರ ರಾತ್ರಿ ಸೇವೆಯ ಬಸ್ಗಳಿಗೆ ಮುಂಗಡ ಕಾಯ್ದಿರಿಸಿದಲ್ಲಿ ಮಾತ್ರ ಬಸ್ಗಳ ಕಾರ್ಯಾಚರಣೆ ಮಾಡಲಾಗುವುದು. ಜನ ಸಂದಣೆ ಇದ್ದರೂ ಕಾರ್ಯಾಚರಣೆ ಮಾಡಲಾಗುವುದು’ ಎಂದು ತಿಳಿಸಿದೆ.</p>.<p>ಕೋವಿಡ್ –19 ಭೀತಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವ ಕಾರಣ ಶುಕ್ರವಾರವೂ ಕೆಎಸ್ಆರ್ಟಿಸಿ, 1,385 ಮಾರ್ಗಗಳ ಸಂಚಾರವನ್ನು ರದ್ದು ಮಾಡಿದೆ. ನಿಗಮದ ವರಮಾನದಲ್ಲಿ ಮಾ.1ರಿಂದ ಈವರೆಗೆ ₹10.58 ಖೋತಾ ಆಗಿದೆ. ಒಟ್ಟು 49,216 ಮಂದಿ ಪ್ರಯಾಣ ರದ್ದು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>