ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಬೆಂಗಳೂರು-ಕನಕಪುರ ರಸ್ತೆಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಸಲುವಾಗಿ ಮರಗಳ ತೆರವು ಸಂಬಂಧ ಇದೇ 12ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರು-ಕನಕಪುರ ರಸ್ತೆಯ (ನೈಸ್ ರಸ್ತೆಯ ಕೂಡು ರಸ್ತೆ) ಯು.ಎಂ.ಕಾವಲ್ ಟ್ರೀ ಪಾರ್ಕ್ ಆವರಣದಲ್ಲಿ ಸಭೆ ಏರ್ಪಡಿಸಲಾಗಿದೆ.
ಆಸಕ್ತ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ, ಸಲಹೆ- ಸೂಚನೆಗಳನ್ನು ನೀಡಬಹುದು ಎಂದು ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.