<p><strong>ಬೆಂಗಳೂರು:</strong> ನಗರದ ಹೊರ ವಲಯದ ಕನ್ನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸಿರುವ ಕೆಂಪೇಗೌಡ ಬಡಾವಣೆಯಲ್ಲಿ 100 ವರ್ಷಗಳಿಗೂ ಹಳೆಯ‘ಕಾಡು ಬೂರುಗ’ದ ಮರವೊಂದಿದ್ದು, ಅದನ್ನು ಉಳಿಸಲು ಗ್ರಾಮಸ್ಥರು ಪಣ ತೊಟ್ಟಿದ್ದಾರೆ.</p>.<p>ಬಡಾವಣೆಯ ಬಟಾಬಯಲಿನಲ್ಲಿ ಹಳೆಯದಾದ ಹೆಸರಿನ ದೊಡ್ಡ ಮರವೊಂದಿದೆ. ಇದರೊಂದಿಗೆ ಇದ್ದ ನೂರಾರು ಮರಗಳು ಈಗ ಇಲ್ಲ, ಅದೃಷ್ಟವಶಾತ್ ಈ ಮರಕ್ಕೆ ಕೊಡಲಿ ಏಟು ಬಿದ್ದಿಲ್ಲ.</p>.<p>‘ರಾಜಕಾಲುವೆ ನಿರ್ಮಾಣಕ್ಕಾಗಿ ಮರ ಕಡಿಯಲು ಬಿಡಿಎ ಅಧಿಕಾರಿಗಳು ಗುರುತು ಮಾಡಿದ್ದರು. ಆದರೆ, ಅದಕ್ಕೆ ಅವಕಾಶ ಕೊಟ್ಟಿಲ್ಲ. ಈ ಮರ ನಮಗೆ ದೇವರ ಸಮಾನ. ಐದಾರು ತಲೆಮಾರುಗಳಿಂದ ಈ ಮರದೊಂದಿಗೆ ಭಾವನಾತ್ಮಕವಾಗಿ ಬೆರೆತಿದ್ದೇವೆ’ ಎಂದು ಗ್ರಾಮಸ್ಥರು ಹೇಳಿದರು.</p>.<p>‘ನಿತ್ಯ 80ರಿಂದ 100 ನವಿಲುಗಳು ಈ ಮರದಲ್ಲಿ ಆಶ್ರಯ ಪಡೆಯುತ್ತಿವೆ. ಈ ಮರ ಉಳಿಸಿಕೊಳ್ಳುವುದು ಎಲ್ಲರ ಕರ್ತವ್ಯ’ ಎಂದು ಧರ್ಮೇಂದ್ರ ಕುಮಾರ್ ಎಂಬುದು ವಿಡಿಯೊ ಮಾಡಿ ಫೇಸ್ಬುಕ್ನಲ್ಲೂ ಹಂಚಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಹೊರ ವಲಯದ ಕನ್ನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸಿರುವ ಕೆಂಪೇಗೌಡ ಬಡಾವಣೆಯಲ್ಲಿ 100 ವರ್ಷಗಳಿಗೂ ಹಳೆಯ‘ಕಾಡು ಬೂರುಗ’ದ ಮರವೊಂದಿದ್ದು, ಅದನ್ನು ಉಳಿಸಲು ಗ್ರಾಮಸ್ಥರು ಪಣ ತೊಟ್ಟಿದ್ದಾರೆ.</p>.<p>ಬಡಾವಣೆಯ ಬಟಾಬಯಲಿನಲ್ಲಿ ಹಳೆಯದಾದ ಹೆಸರಿನ ದೊಡ್ಡ ಮರವೊಂದಿದೆ. ಇದರೊಂದಿಗೆ ಇದ್ದ ನೂರಾರು ಮರಗಳು ಈಗ ಇಲ್ಲ, ಅದೃಷ್ಟವಶಾತ್ ಈ ಮರಕ್ಕೆ ಕೊಡಲಿ ಏಟು ಬಿದ್ದಿಲ್ಲ.</p>.<p>‘ರಾಜಕಾಲುವೆ ನಿರ್ಮಾಣಕ್ಕಾಗಿ ಮರ ಕಡಿಯಲು ಬಿಡಿಎ ಅಧಿಕಾರಿಗಳು ಗುರುತು ಮಾಡಿದ್ದರು. ಆದರೆ, ಅದಕ್ಕೆ ಅವಕಾಶ ಕೊಟ್ಟಿಲ್ಲ. ಈ ಮರ ನಮಗೆ ದೇವರ ಸಮಾನ. ಐದಾರು ತಲೆಮಾರುಗಳಿಂದ ಈ ಮರದೊಂದಿಗೆ ಭಾವನಾತ್ಮಕವಾಗಿ ಬೆರೆತಿದ್ದೇವೆ’ ಎಂದು ಗ್ರಾಮಸ್ಥರು ಹೇಳಿದರು.</p>.<p>‘ನಿತ್ಯ 80ರಿಂದ 100 ನವಿಲುಗಳು ಈ ಮರದಲ್ಲಿ ಆಶ್ರಯ ಪಡೆಯುತ್ತಿವೆ. ಈ ಮರ ಉಳಿಸಿಕೊಳ್ಳುವುದು ಎಲ್ಲರ ಕರ್ತವ್ಯ’ ಎಂದು ಧರ್ಮೇಂದ್ರ ಕುಮಾರ್ ಎಂಬುದು ವಿಡಿಯೊ ಮಾಡಿ ಫೇಸ್ಬುಕ್ನಲ್ಲೂ ಹಂಚಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>