ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ ಸ್ಥಳಾಂತರದ ವಿವರ ನೀಡಲು ಸೂಚನೆ

Last Updated 22 ಜೂನ್ 2021, 21:18 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ರೈಲು ಮಾರ್ಗದ ಕಾಮಗಾರಿಗಾಗಿ ಮರಗಳನ್ನು ಸ್ಥಳಾಂತರಿಸಲು ಉದ್ದೇಶಿಸಿರುವ ನಿರ್ದಿಷ್ಟ ಸ್ಥಳದ ವಿವರ ಸಲ್ಲಿಸುವಂತೆ ಮರಗಳ ತಜ್ಞರ ಸಮಿತಿಗೆ (ಟಿಇಸಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

ಟಿಇಸಿ ಕಾರ್ಯನಿರ್ವಹಣೆ ಬಗ್ಗೆ ಮಾರ್ಗಸೂಚಿ ರೂಪಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು.

‘ಮರಗಳು ಇರುವ ಜಾಗದಿಂದ ಸಮೀಪದ ಸ್ಥಳಗಳನ್ನು ಗುರುತಿಸಿ ಅಂದೇ ಸ್ಥಳಾಂತರ ಮಾಡಬೇಕಾಗುತ್ತದೆ. ನಿರ್ದಿಷ್ಟ ಜಾಗವನ್ನು ಟಿಇಸಿ ಅಂತಿಮಗೊಳಿಸಿದ ಬಳಿಕವೇ ಸ್ಥಳಾಂತರ ಮಾಡಬೇಕು’ ಎಂದು ಪೀಠ ತಿಳಿಸಿತು.

‘ಮರಗಳ ಸಂರಕ್ಷಣಾ ಕಾಯ್ದೆಯಡಿ ಇರುವ ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಳಾಂತರ ಮಾಡಬೇಕು. ಸ್ಥಳಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT