<p><strong>ಯಲಹಂಕ: </strong>‘ನಮ್ಮ ಹಕ್ಕನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮರಗಳ, ದನಕರುಗಳ ಶಾಪ ನಿಮ್ಮನ್ನು ಎಂದಿಗೂ ಸುಮ್ಮನೆ ಬಿಡುವುದಿಲ್ಲ’ ಎಂದು ಉದ್ದೇಶಿತ ಡಾ.ಶಿವರಾಮ ಕಾರಂತರ ಬಡಾವಣೆಗಾಗಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರು ಹೇಳಿದರು.</p>.<p>ರಾಮಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶಿವರಾಮಕಾರಂತ ಬಡಾವಣೆ ರೈತರ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ರೈತ ಮುಖಂಡ ಮಾವಳ್ಳಿಪುರ ಬಿ.ಶ್ರೀನಿವಾಸ್, ರೈತರ ಜಮೀನು ಮತ್ತು ರೈತರಮೇಲೆ ದಬ್ಬಾಳಿಕೆ ಮಾಡುವ ಅಧಿಕಾರ ಯಾವ ಶಾಸಕಾಂಗಕ್ಕೂ ಇಲ್ಲ ಎಂದರು.</p>.<p>ರೈತ ಮುಖಂಡ ರಾಮಗೊಂಡನಹಳ್ಳಿ ಎಂ.ರಮೇಶ್ ಮಾತನಾಡಿ, ಬಡಾವಣೆಗಾಗಿ ಭೂಮಿಯನ್ನು ಕಳೆದುಕೊಂಡಿರುವ ನಮ್ಮ 17 ಗ್ರಾಮಗಳಲ್ಲಿ ಈಗ ಶೋಕದ ಛಾಯೆ ಆವರಿಸಿದ್ದು, ನಮಗೆ ಯುಗಾದಿ ಹಬ್ಬವಿಲ್ಲ ಎಂದು ಹೇಳಿದರು.</p>.<p>ನಿವೃತ್ತ ಎಸ್.ಪಿ ಎನ್.ಕೃಷ್ಣಪ್ಪ, ಮುಖಂಡರಾದ ಎಂ.ಮುನಿರಾಜು, ಬಸವರಾಜ ಪಾದಯಾತ್ರಿ, ವೀರಸಾಗರ ವಸಂತ್, ಬೆಟ್ಟಹಳ್ಳಿ ಸುರೇಶ್ಗೌಡ, ಬ್ಯಾಲಕೆರೆ ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>‘ನಮ್ಮ ಹಕ್ಕನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮರಗಳ, ದನಕರುಗಳ ಶಾಪ ನಿಮ್ಮನ್ನು ಎಂದಿಗೂ ಸುಮ್ಮನೆ ಬಿಡುವುದಿಲ್ಲ’ ಎಂದು ಉದ್ದೇಶಿತ ಡಾ.ಶಿವರಾಮ ಕಾರಂತರ ಬಡಾವಣೆಗಾಗಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರು ಹೇಳಿದರು.</p>.<p>ರಾಮಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶಿವರಾಮಕಾರಂತ ಬಡಾವಣೆ ರೈತರ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ರೈತ ಮುಖಂಡ ಮಾವಳ್ಳಿಪುರ ಬಿ.ಶ್ರೀನಿವಾಸ್, ರೈತರ ಜಮೀನು ಮತ್ತು ರೈತರಮೇಲೆ ದಬ್ಬಾಳಿಕೆ ಮಾಡುವ ಅಧಿಕಾರ ಯಾವ ಶಾಸಕಾಂಗಕ್ಕೂ ಇಲ್ಲ ಎಂದರು.</p>.<p>ರೈತ ಮುಖಂಡ ರಾಮಗೊಂಡನಹಳ್ಳಿ ಎಂ.ರಮೇಶ್ ಮಾತನಾಡಿ, ಬಡಾವಣೆಗಾಗಿ ಭೂಮಿಯನ್ನು ಕಳೆದುಕೊಂಡಿರುವ ನಮ್ಮ 17 ಗ್ರಾಮಗಳಲ್ಲಿ ಈಗ ಶೋಕದ ಛಾಯೆ ಆವರಿಸಿದ್ದು, ನಮಗೆ ಯುಗಾದಿ ಹಬ್ಬವಿಲ್ಲ ಎಂದು ಹೇಳಿದರು.</p>.<p>ನಿವೃತ್ತ ಎಸ್.ಪಿ ಎನ್.ಕೃಷ್ಣಪ್ಪ, ಮುಖಂಡರಾದ ಎಂ.ಮುನಿರಾಜು, ಬಸವರಾಜ ಪಾದಯಾತ್ರಿ, ವೀರಸಾಗರ ವಸಂತ್, ಬೆಟ್ಟಹಳ್ಳಿ ಸುರೇಶ್ಗೌಡ, ಬ್ಯಾಲಕೆರೆ ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>