ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಗಮದಿಂದ ದಾವಣಗೆರೆ, ಹರಿಹರ, ಶಿವಮೊಗ್ಗ, ವಿಜಯಪುರ, ಮಂಗಳೂರು, ಬೀದರ್, ಕಲಬುರ್ಗಿ, ಚಿತ್ರದುರ್ಗ, ಹಿರಿಯೂರು ಸೇರಿದಂತೆ ಹಲವು ಕಡೆಗಳಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಪ್ರಸ್ತಾವವಿದೆ. ಈ ಉದ್ದೇಶಕ್ಕಾಗಿ ಜಮೀನು ಗುರುತಿಸುವಂತೆ ವಿವಿಧ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ‘ ಎಂದರು.