ಭಾನುವಾರ ಇಲ್ಲಿ ದೇವಪ್ರಿಯ ಚಾರಿಟಬಲ್ ಟ್ರಸ್ಟ್ (ರಿ) ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ‘ಟ್ರಸ್ಟ್ನ ಕಾರ್ಯಚಟುವಟಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸಾರ್ಹತೆ ಮೂಡಿಸಲು ಸಾಕಷ್ಟು ಪರಿಶ್ರಮ ಪಡಬೇಕಾಗುತ್ತದೆ. ಸಮಯಾವಕಾಶವೂ ಬೇಕಾಗುತ್ತದೆ. ಈ ಹಂತದಲ್ಲಿ ಹಿರಿಯರ ಮಾರ್ಗದರ್ಶನ ಮಹತ್ವದ್ದಾಗಿದೆ. ಎಲ್ಲರನ್ನೂ ಜತೆಯಲ್ಲಿ ಕರೆದುಕೊಂಡು ಹೋಗುವ ಸಮರ್ಥ ನಾಯಕತ್ವವೂ ಬೇಕಾಗುತ್ತದೆ’ ಎಂದರು.