‘ನಮ್ಮ ರಾಜ್ಯದ ಕಾರ್ಮಿಕರು ಕಟ್ಟಡ ನಿರ್ಮಾಣದಲ್ಲಿ ನೈಪುಣ್ಯ ಹೊಂದಿದ್ದಾರೆ. ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ, ನವದೆಹಲಿಯಂತಹ ರಾಜ್ಯಗಳಿಗೆ ವಲಸೆ ಹೋಗಿ, ಶೋಷಣೆಗೊಳಗಾಗುತ್ತಿರುವ ಕನ್ನಡಿಗರೂ ರಾಜ್ಯಕ್ಕೆ ಮರಳಿದ್ದಾರೆ. ಅವರಿಗೂ ನಮ್ಮ ರಾಜ್ಯದಲ್ಲಿಯೇ ಉದ್ಯೋಗಾವಕಾಶ ಒದಗಿಸಿದಲ್ಲಿ ವಲಸೆ ತಡೆಯಬಹುದು’ ಎಂದು ಸಲಹೆ ನೀಡಿದ್ದಾರೆ.