<p><strong>ಬೊಮ್ಮನಹಳ್ಳಿ:</strong> ‘ತುಳುವರ ಸಂಸ್ಕೃತಿ, ಭಾಷೆ, ಆಹಾರ, ಆಚಾರ-ವಿಚಾರ ಬಹಳ ವಿಶಿಷ್ಟತೆಯಿಂದ ಕೂಡಿದ್ದು, ಈ ವೈವಿಧ್ಯವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಬೆಂಗಳೂರು ಬಿಲ್ಲವರ ಸಂಘದ ಅಧ್ಯಕ್ಷ ವೇದಕುಮಾರ್ ಹೇಳಿದರು.</p>.<p>ತುಳುವೆರೆಂಕುಲು ಸಂಸ್ಥೆ ವಿಜಯ ಬ್ಯಾಂಕ್ ಲೇಔಟ್ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆಟಿಡೊಂಜಿ ಕೂಟ ಉದ್ಘಾಟಿಸಿ ಮಾತನಾಡಿದರು.</p>.<p>‘ತುಳುನಾಡಿನಲ್ಲಷ್ಟೇ ಭೂತಾ ರಾಧನೆ ಹಾಗೂ ನಾಗಾರಾಧನೆ, ಮದಿಪು ಮುಂತಾದ ಆಚರಣೆಗಳನ್ನು ಕಾಣಬಹುದು. ನಾವು ಬದುಕಿಗಾಗಿ ಎಲ್ಲೇ ಹೋಗಿ ನೆಲೆಸಿದರೂ ನಮ್ಮ ಸಂಸ್ಕೃತಿಯನ್ನು ಬಿಡಬಾರದು. ಟಿ.ವಿ, ಮೊಬೈಲ್ಗಳ ಯಾಂತ್ರಿಕ ಬದುಕಿನ ಜಂಜಾಟದಲ್ಲಿ ಇವೆಲ್ಲವೂ ನಶಿಸುವ ಅಪಾಯವಿದ್ದು, ತುಳು ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವಲ್ಲಿ<br />ತಾಯಂದಿರ ಪಾತ್ರ ದೊಡ್ಡದು’ ಎಂದರು.</p>.<p>ಎ.ಜೆ.ಭಂಡಾರಿ, ದಕ್ಷಿಣ ಕನ್ನಡಿಗರ ಸಂಘದ ಅಧ್ಯಕ್ಷ ರಾಮಚಂದ್ರ ಉಪಾಧ್ಯ, ಕಾನೂನು ಸಲಹೆಗಾರ್ತಿ ಶಕುಂತಲಾ ಶೆಟ್ಟಿ ಇದ್ದರು.</p>.<p>ಕರಾವಳಿಯ ಗ್ರಾಮೀಣ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಕಂಬಳ, ತೆಂಗಿನ ಕಾಯಿ ಕಟ್ಟುವುದು, ತಪ್ಪಂಗಾಯಿ ಸ್ಪರ್ಧೆಗಳು ಸೇರಿದಂತೆ ಹಾಡುಗಾರಿಕೆ, ಮಹಿಳೆಯರಿಗಾಗಿ ರಂಗೋಲಿ, ಮಕ್ಕಳಿಗಾಗಿಯೇ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನೂರಾರು ಜನರು ಭಾಗವಹಿಸಿದ್ದರು.</p>.<p>ಯಕ್ಷಗಾನ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ:</strong> ‘ತುಳುವರ ಸಂಸ್ಕೃತಿ, ಭಾಷೆ, ಆಹಾರ, ಆಚಾರ-ವಿಚಾರ ಬಹಳ ವಿಶಿಷ್ಟತೆಯಿಂದ ಕೂಡಿದ್ದು, ಈ ವೈವಿಧ್ಯವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಬೆಂಗಳೂರು ಬಿಲ್ಲವರ ಸಂಘದ ಅಧ್ಯಕ್ಷ ವೇದಕುಮಾರ್ ಹೇಳಿದರು.</p>.<p>ತುಳುವೆರೆಂಕುಲು ಸಂಸ್ಥೆ ವಿಜಯ ಬ್ಯಾಂಕ್ ಲೇಔಟ್ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆಟಿಡೊಂಜಿ ಕೂಟ ಉದ್ಘಾಟಿಸಿ ಮಾತನಾಡಿದರು.</p>.<p>‘ತುಳುನಾಡಿನಲ್ಲಷ್ಟೇ ಭೂತಾ ರಾಧನೆ ಹಾಗೂ ನಾಗಾರಾಧನೆ, ಮದಿಪು ಮುಂತಾದ ಆಚರಣೆಗಳನ್ನು ಕಾಣಬಹುದು. ನಾವು ಬದುಕಿಗಾಗಿ ಎಲ್ಲೇ ಹೋಗಿ ನೆಲೆಸಿದರೂ ನಮ್ಮ ಸಂಸ್ಕೃತಿಯನ್ನು ಬಿಡಬಾರದು. ಟಿ.ವಿ, ಮೊಬೈಲ್ಗಳ ಯಾಂತ್ರಿಕ ಬದುಕಿನ ಜಂಜಾಟದಲ್ಲಿ ಇವೆಲ್ಲವೂ ನಶಿಸುವ ಅಪಾಯವಿದ್ದು, ತುಳು ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವಲ್ಲಿ<br />ತಾಯಂದಿರ ಪಾತ್ರ ದೊಡ್ಡದು’ ಎಂದರು.</p>.<p>ಎ.ಜೆ.ಭಂಡಾರಿ, ದಕ್ಷಿಣ ಕನ್ನಡಿಗರ ಸಂಘದ ಅಧ್ಯಕ್ಷ ರಾಮಚಂದ್ರ ಉಪಾಧ್ಯ, ಕಾನೂನು ಸಲಹೆಗಾರ್ತಿ ಶಕುಂತಲಾ ಶೆಟ್ಟಿ ಇದ್ದರು.</p>.<p>ಕರಾವಳಿಯ ಗ್ರಾಮೀಣ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಕಂಬಳ, ತೆಂಗಿನ ಕಾಯಿ ಕಟ್ಟುವುದು, ತಪ್ಪಂಗಾಯಿ ಸ್ಪರ್ಧೆಗಳು ಸೇರಿದಂತೆ ಹಾಡುಗಾರಿಕೆ, ಮಹಿಳೆಯರಿಗಾಗಿ ರಂಗೋಲಿ, ಮಕ್ಕಳಿಗಾಗಿಯೇ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನೂರಾರು ಜನರು ಭಾಗವಹಿಸಿದ್ದರು.</p>.<p>ಯಕ್ಷಗಾನ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>