<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ಶಿವಾಜಿನಗರ ಮೆಟ್ರೊ ನಿಲ್ದಾಣದ ಬಳಿ ಸುರಂಗ ಮಾರ್ಗ ಕಾಮಗಾರಿ ವೇಳೆ ಮಣ್ಣು ಕುಸಿದಿರುವುದರಿಂದ ಇಲ್ಲಿ ಕಾಮಗಾರಿ ಸುಮಾರು 15 ದಿನಗಳಷ್ಟು ವಿಳಂಬವಾಗಲಿದೆ.</p>.<p>‘ಸುರಂಗ ಮಾರ್ಗ ನಿರ್ಮಾಣ ವೇಳೆ ಮಣ್ಣು ಕುಸಿದು, ಸುಮಾರು 10 ಅಡಿ ಅಷ್ಟು ಆಳವಾದ ಗುಂಡಿ ಬಿದ್ದಿದೆ. ಆ ಸ್ಥಳವನ್ನು ಮಣ್ಣು, ಸಿಮೆಂಟ್ ಸೇರಿದಂತೆ ಇತರೆ ವಸ್ತುಗಳನ್ನು ಬಳಸಿ ಗಟ್ಟಿ ಮಾಡಲಾಗಿದೆ. ಆ ಸ್ಥಳವಿನ್ನೂ ಹಸಿಯಾಗಿದ್ದು, ಸಂಪೂರ್ಣ ಒಣಗಲು ಎಂಟರಿಂದ ಹತ್ತು ದಿನಗಳು ಬೇಕಾಗಬಹುದು. ಗಟ್ಟಿಯಾದ ನಂತರ ಕಾಮಗಾರಿ ಮುಂದುವರಿಸಲಾಗುವುದು’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸುರಂಗ ಕೊರೆಯುವ ಯಂತ್ರ (ಟಿಬಿಎಂ) ‘ಅವನಿ’ ಹತ್ತು ದಿನಗಳ ಹಿಂದೆ ಈ ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿದಿತ್ತು.ನೆಲ ಮಟ್ಟದಿಂದ ಹತ್ತು ಅಡಿಗಳಿಗೂ ಹೆಚ್ಚು ಆಳದಲ್ಲಿ ಕಾಮಗಾರಿ ನಡೆಯುತ್ತಿದ್ದಾಗ ಮಣ್ಣು ಕುಸಿದಿದೆ.</p>.<p>‘ನೆಲ ಸ್ಥಿರವಾಗಿಲ್ಲದಿದ್ದರೆ ಅದನ್ನು ಸಿಮೆಂಟ್ ಬಳಸಿ ಗಟ್ಟಿಮಾಡಿಕೊಂಡು ಕಾಮಗಾರಿ ನಡೆಸುವುದು ಅನಿವಾರ್ಯ’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ಶಿವಾಜಿನಗರ ಮೆಟ್ರೊ ನಿಲ್ದಾಣದ ಬಳಿ ಸುರಂಗ ಮಾರ್ಗ ಕಾಮಗಾರಿ ವೇಳೆ ಮಣ್ಣು ಕುಸಿದಿರುವುದರಿಂದ ಇಲ್ಲಿ ಕಾಮಗಾರಿ ಸುಮಾರು 15 ದಿನಗಳಷ್ಟು ವಿಳಂಬವಾಗಲಿದೆ.</p>.<p>‘ಸುರಂಗ ಮಾರ್ಗ ನಿರ್ಮಾಣ ವೇಳೆ ಮಣ್ಣು ಕುಸಿದು, ಸುಮಾರು 10 ಅಡಿ ಅಷ್ಟು ಆಳವಾದ ಗುಂಡಿ ಬಿದ್ದಿದೆ. ಆ ಸ್ಥಳವನ್ನು ಮಣ್ಣು, ಸಿಮೆಂಟ್ ಸೇರಿದಂತೆ ಇತರೆ ವಸ್ತುಗಳನ್ನು ಬಳಸಿ ಗಟ್ಟಿ ಮಾಡಲಾಗಿದೆ. ಆ ಸ್ಥಳವಿನ್ನೂ ಹಸಿಯಾಗಿದ್ದು, ಸಂಪೂರ್ಣ ಒಣಗಲು ಎಂಟರಿಂದ ಹತ್ತು ದಿನಗಳು ಬೇಕಾಗಬಹುದು. ಗಟ್ಟಿಯಾದ ನಂತರ ಕಾಮಗಾರಿ ಮುಂದುವರಿಸಲಾಗುವುದು’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸುರಂಗ ಕೊರೆಯುವ ಯಂತ್ರ (ಟಿಬಿಎಂ) ‘ಅವನಿ’ ಹತ್ತು ದಿನಗಳ ಹಿಂದೆ ಈ ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿದಿತ್ತು.ನೆಲ ಮಟ್ಟದಿಂದ ಹತ್ತು ಅಡಿಗಳಿಗೂ ಹೆಚ್ಚು ಆಳದಲ್ಲಿ ಕಾಮಗಾರಿ ನಡೆಯುತ್ತಿದ್ದಾಗ ಮಣ್ಣು ಕುಸಿದಿದೆ.</p>.<p>‘ನೆಲ ಸ್ಥಿರವಾಗಿಲ್ಲದಿದ್ದರೆ ಅದನ್ನು ಸಿಮೆಂಟ್ ಬಳಸಿ ಗಟ್ಟಿಮಾಡಿಕೊಂಡು ಕಾಮಗಾರಿ ನಡೆಸುವುದು ಅನಿವಾರ್ಯ’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>