<p><strong>ಬೆಂಗಳೂರು:</strong> ‘ಮಹಾನಗರದ ಬಳಿಯಿರುವ ಏಕಮಾತ್ರ ತುರಹಳ್ಳಿ ಅರಣ್ಯವು ನಿರಂತರ ಒತ್ತುವರಿಗೆ ಒಳಗಾಗಿ ನಶಿಸುತ್ತಿದೆ. ಒತ್ತುವರಿ ತೆರವುಗೊಳಿಸಿ ಅರಣ್ಯವನ್ನು ಸಂರಕ್ಷಿಸಬೇಕು’ ಎಂದು ಸಿಪಿಎಂ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.</p>.<p>‘ಹಲವು ದೈತ್ಯ ಬಿಲ್ಡರ್ಗಳು ತುರಹಳ್ಳಿ ಅರಣ್ಯವನ್ನು ನಿರಂತರವಾಗಿ ಅತಿಕ್ರಮಿಸುತ್ತಾ ಬರುತ್ತಿದ್ದಾರೆ. ಅತಿಕ್ರಮಣವನ್ನು ತೆರವುಗೊಳಿಸುವ ಬದಲು ಇರುವ ಅರಣ್ಯ ಪ್ರದೇಶವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ‘ಟ್ರೀ ಪಾರ್ಕ್’ ಸ್ಥಾಪಿಸಲು ಮುಂದಾಗಿರುವ ಕ್ರಮ ಖಂಡನಾರ್ಹ’ ಎಂದು ಸಮಿತಿಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಬಿಜೆಪಿ ನೇತೃತ್ವದ ರಾಜ್ಯ ಸಕಾ೯ರವು ಬಿಡುಗಡೆ ಮಾಡಿರುವ ಬೆಂಗಳೂರು ವಿಷನ್ 2022 ರಲ್ಲಿನ ಹಸಿರು ಬೆಂಗಳೂರು ಉಪಕ್ರಮದ ಭಾಗವಾಗಿ ತುರಹಳ್ಳಿ ಅರಣ್ಯವನ್ನು ಸಂರಕ್ಷಿಸುವ ಘೋಷಣೆ ಮಾಡಿದೆ. ಆದರೆ ಟ್ರೀ ಪಾಕ್೯ ಸ್ಥಾಪಿಸಲು ಮುಂದಾಗಿರುವ ಕ್ರಮ ಅದಕ್ಕೆ ವ್ಯತಿರಿಕ್ತವಾಗಿದೆ’ ಎಂದು ಅವರು ದೂರಿದ್ದಾರೆ.</p>.<p>‘ಮರಗಳ ಉದ್ಯಾನ ಸ್ಥಾಪಿಸುವ ಬದಲು ಸ್ಥಳೀಯರು ಮತ್ತು ಪರಿಸರವಾದಿಗಳ ಆಕ್ಷೇಪಗಳನ್ನು ಪರಿಗಣಿಸಿ ತುರಹಳ್ಳಿ ಅರಣ್ಯವನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಹಾನಗರದ ಬಳಿಯಿರುವ ಏಕಮಾತ್ರ ತುರಹಳ್ಳಿ ಅರಣ್ಯವು ನಿರಂತರ ಒತ್ತುವರಿಗೆ ಒಳಗಾಗಿ ನಶಿಸುತ್ತಿದೆ. ಒತ್ತುವರಿ ತೆರವುಗೊಳಿಸಿ ಅರಣ್ಯವನ್ನು ಸಂರಕ್ಷಿಸಬೇಕು’ ಎಂದು ಸಿಪಿಎಂ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.</p>.<p>‘ಹಲವು ದೈತ್ಯ ಬಿಲ್ಡರ್ಗಳು ತುರಹಳ್ಳಿ ಅರಣ್ಯವನ್ನು ನಿರಂತರವಾಗಿ ಅತಿಕ್ರಮಿಸುತ್ತಾ ಬರುತ್ತಿದ್ದಾರೆ. ಅತಿಕ್ರಮಣವನ್ನು ತೆರವುಗೊಳಿಸುವ ಬದಲು ಇರುವ ಅರಣ್ಯ ಪ್ರದೇಶವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ‘ಟ್ರೀ ಪಾರ್ಕ್’ ಸ್ಥಾಪಿಸಲು ಮುಂದಾಗಿರುವ ಕ್ರಮ ಖಂಡನಾರ್ಹ’ ಎಂದು ಸಮಿತಿಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಬಿಜೆಪಿ ನೇತೃತ್ವದ ರಾಜ್ಯ ಸಕಾ೯ರವು ಬಿಡುಗಡೆ ಮಾಡಿರುವ ಬೆಂಗಳೂರು ವಿಷನ್ 2022 ರಲ್ಲಿನ ಹಸಿರು ಬೆಂಗಳೂರು ಉಪಕ್ರಮದ ಭಾಗವಾಗಿ ತುರಹಳ್ಳಿ ಅರಣ್ಯವನ್ನು ಸಂರಕ್ಷಿಸುವ ಘೋಷಣೆ ಮಾಡಿದೆ. ಆದರೆ ಟ್ರೀ ಪಾಕ್೯ ಸ್ಥಾಪಿಸಲು ಮುಂದಾಗಿರುವ ಕ್ರಮ ಅದಕ್ಕೆ ವ್ಯತಿರಿಕ್ತವಾಗಿದೆ’ ಎಂದು ಅವರು ದೂರಿದ್ದಾರೆ.</p>.<p>‘ಮರಗಳ ಉದ್ಯಾನ ಸ್ಥಾಪಿಸುವ ಬದಲು ಸ್ಥಳೀಯರು ಮತ್ತು ಪರಿಸರವಾದಿಗಳ ಆಕ್ಷೇಪಗಳನ್ನು ಪರಿಗಣಿಸಿ ತುರಹಳ್ಳಿ ಅರಣ್ಯವನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>