ಸಂಸ್ಥೆಯ ಮತ್ತೊಬ್ಬ ನಿರ್ದೇಶಕ ಸುಜಯ್ ಬೇಲೂರು,‘ಸಂಸ್ಥೆ ಈಗ ಉತ್ತರ ಕರ್ನಾಟಕ ಹಾಗೂ ನಾಸಿಕ್ ಈರುಳ್ಳಿ ಬೆಳೆಗಳ ಮೇಲೆ ಕೇಂದ್ರೀಕರಿಸಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಮ್ಮು–ಕಾಶ್ಮೀರದಲ್ಲಿ ಕಾರ್ಯಾಚರಣೆ ಆರಂಭಿಸಲು ಯೋಜನೆ ರೂಪಿಸಿದೆ’ ಎಂದು ವಿವರಿಸಿದರು.