<p><strong>ಬೆಂಗಳೂರು</strong>: ರಸ್ತೆಯಲ್ಲಿ ಕುಸಿದು ಬಿದ್ದಿದ್ದರಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಸುದ್ದಿವಾಹಿನಿ ನಿರೂಪಕ ಗಜಾನನ ಹೆಗಡೆ (39) ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ (ಫೆ.24) ರಾತ್ರಿ ಅಸುನೀಗಿದರು.</p>.<p>ಉತ್ತರಕನ್ನಡ ಜಿಲ್ಲೆಯ ಗಜಾನನ ಅವರು ನಗರದ ಕುಮಾರಸ್ವಾಮಿ ಲೇಔಟ್ನಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p>‘ಫೆ. 23ರಂದು ರಾತ್ರಿ ಪರಿಚಯಸ್ಥರ ಜೊತೆ ಹೊರಟಿದ್ದ ಗಜಾನನ ಏಕಾಏಕಿ ಕುಸಿದು ಬಿದ್ದಿದ್ದರು. ಅವರನ್ನು ಟಿ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಹೇಳಿದರು.</p>.<p class="Subhead">ಸ್ನೇಹಿತರು ನಾಪತ್ತೆ: ‘ಗಜಾನನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ನಾಲ್ವರು ಪರಿಚಯಸ್ಥರು, ಎಟಿಎಂ ಘಟಕದಿಂದ ಹಣ ತರುವುದಾಗಿ ಹೇಳಿ ಹೋದವರು ವಾಪಸು ಬರಲಿಲ್ಲ. ಗಜಾನನ ಒಬ್ಬರೇ ಇದ್ದರು. ಸಂಬಂಧಿಕರೂ ಬಂದಿರಲಿಲ್ಲ. ವೈದ್ಯರೇ ಚಿಕಿತ್ಸೆ ಮುಂದುವರಿಸಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಸಾವಿನ ನಂತರವೂ ಮೃತದೇಹವನ್ನು ನಾವೇ ಕಿಮ್ಸ್ ಶವಾಗಾರಕ್ಕೆ ಸಾಗಿಸಿದ್ದೇವೆ. ಮಂಗಳವಾರವಷ್ಟೇ ಸಂಬಂಧಿಕರೊಬ್ಬರು ಬಂದಿದ್ದು, ಅವರ ಹೇಳಿಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆಯಲ್ಲಿ ಕುಸಿದು ಬಿದ್ದಿದ್ದರಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಸುದ್ದಿವಾಹಿನಿ ನಿರೂಪಕ ಗಜಾನನ ಹೆಗಡೆ (39) ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ (ಫೆ.24) ರಾತ್ರಿ ಅಸುನೀಗಿದರು.</p>.<p>ಉತ್ತರಕನ್ನಡ ಜಿಲ್ಲೆಯ ಗಜಾನನ ಅವರು ನಗರದ ಕುಮಾರಸ್ವಾಮಿ ಲೇಔಟ್ನಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p>‘ಫೆ. 23ರಂದು ರಾತ್ರಿ ಪರಿಚಯಸ್ಥರ ಜೊತೆ ಹೊರಟಿದ್ದ ಗಜಾನನ ಏಕಾಏಕಿ ಕುಸಿದು ಬಿದ್ದಿದ್ದರು. ಅವರನ್ನು ಟಿ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಹೇಳಿದರು.</p>.<p class="Subhead">ಸ್ನೇಹಿತರು ನಾಪತ್ತೆ: ‘ಗಜಾನನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ನಾಲ್ವರು ಪರಿಚಯಸ್ಥರು, ಎಟಿಎಂ ಘಟಕದಿಂದ ಹಣ ತರುವುದಾಗಿ ಹೇಳಿ ಹೋದವರು ವಾಪಸು ಬರಲಿಲ್ಲ. ಗಜಾನನ ಒಬ್ಬರೇ ಇದ್ದರು. ಸಂಬಂಧಿಕರೂ ಬಂದಿರಲಿಲ್ಲ. ವೈದ್ಯರೇ ಚಿಕಿತ್ಸೆ ಮುಂದುವರಿಸಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಸಾವಿನ ನಂತರವೂ ಮೃತದೇಹವನ್ನು ನಾವೇ ಕಿಮ್ಸ್ ಶವಾಗಾರಕ್ಕೆ ಸಾಗಿಸಿದ್ದೇವೆ. ಮಂಗಳವಾರವಷ್ಟೇ ಸಂಬಂಧಿಕರೊಬ್ಬರು ಬಂದಿದ್ದು, ಅವರ ಹೇಳಿಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>