ವಿಜ್ಞಾನಿ ಡಾ.ಶ್ರೀಕಾಂತ್ ಶ್ರೀರಾಮ್, ‘ಪ್ರವಾಹದಿಂದ ಸಾಕಷ್ಟು ದಿನಗಳ ಕಾಲ ನೀರು ಒಂದೇ ಸ್ಥಳದಲ್ಲಿ ನಿಂತರೆ ಸಮುದಾಯಕ್ಕೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚು. ಡೆಂಗಿ, ಮಲೇರಿಯಾ ಸೇರಿದಂತೆ ಚರ್ಮ ಸಂಬಂಧಿ ಕಾಯಿಲೆಗಳು ಬರುತ್ತವೆ. ಬೆಂಗಳೂರಿನಲ್ಲಿ ಉಂಟಾಗಿದ್ದ ಪ್ರವಾಹದಿಂದ ಡೆಂಗಿ ಪ್ರಕರಣಗಳು ಹೆಚ್ಚಿವೆ. ಪ್ರವಾಹದ ಸಂದರ್ಭದಲ್ಲಿ ಸಾಂಕ್ರಾಮಿಕ ಕಾಯಿಲೆ ನಿಯಂತ್ರಣಕ್ಕೆ ಮೊದಲು ಆದ್ಯತೆ ನೀಡಬೇಕಿದೆ’ ಎಂದು ಸೂಚಿಸಿದರು.