‘ಬಿ.ಎ ವ್ಯಾಸಂಗ ಮಾಡುತ್ತಿದ್ದ ಆರೋಪಿ ಪಪ್ಪು, ಅರ್ಧಕ್ಕೆ ಶಿಕ್ಷಣ ಮೊಟಕುಗೊಳಿಸಿದ್ದ. ಚುನ್ನಿಲಾಲ್ ಜೊತೆ ಸೇರಿ ಮಾದಕ ವಸ್ತು ಮಾರಲು ಆರಂಭಿಸಿದ್ದ. ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಆರೋಪಿಗಳು, ಪರಿಚಯಸ್ಥ ಗ್ರಾಹಕರಿಗೆ ಮಾರುತ್ತಿದ್ದರು. ಕೆಲ ಸಾಫ್ಟ್ವೇರ್ ಕಂಪನಿ ಉದ್ಯೋಗಿಗಳು ಹಾಗೂ ಕೆಲ ಕಾಲೇಜು ವಿದ್ಯಾರ್ಥಿಗಳು ಗ್ರಾಹಕರಿದ್ದರು’ ಎಂದೂ ಪೊಲೀಸರು ತಿಳಿಸಿದರು.