ಬೆಂಗಳೂರು: ಪಶ್ಚಿಮ ಬಂಗಾಳದಿಂದ ಆಕಸ್ಮಿಕವಾಗಿ ತಪ್ಪಿಸಿಕೊಂಡು ಬಂಗಾರಪೇಟೆ ರೈಲು ನಿಲ್ದಾಣಕ್ಕೆ ಬಂದಿದ್ದ ಇಬ್ಬರು ಮಕ್ಕಳನ್ನು ರೈಲ್ವೆ ಪೊಲೀಸರು ರಕ್ಷಿಸಿ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ನೆರವಿನಿಂದ ಆ ಮಕ್ಕಳು ಪೋಷಕರ ಮಡಿಲು ಸೇರಿದ್ದಾರೆ.
ನವೆಂಬರ್ 28ರಂದು ಬಂಗಾರಪೇಟೆ ರೈಲ್ವೆ ನಿಲ್ದಾಣಕ್ಕೆ ಮಕ್ಕಳು ಬಂದಿದ್ದರು. ಪೊಲೀಸರು ಅವರನ್ನು ವಿಚಾರಿಸಿದಾಗ ಪಶ್ಚಿಮ ಬಂಗಾಳದ ಮೂಲದವರು ಎಂಬುದು ತಿಳಿದುಬಂತು.
ಬಳಿಕ ಅವರ ತಂದೆಯ ಮೊಬೈಲ್ ಸಂಖ್ಯೆ ಪತ್ತೆ ಮಾಡಿ ವಿಡಿಯೊ ಕಾಲ್ ಮಾಡಲಾಯಿತು. ಮಕ್ಕಳು ತಂದೆ–ತಾಯಿ ಪತ್ತೆ ಮಾಡಿದರು. ಪೋಷಕರನ್ನು ಕಾಡುಗೋಡಿ ಪೊಲೀಸ್ ಠಾಣೆಗೆ ಕರೆಸಿ ಮಕ್ಕಳನ್ನು ಸುರಕ್ಷಿತವಾಗಿ ಕಳುಹಿಸಲಾಯಿತು ಎಂದು ಮೂಲಗಳು ತಿಳಿಸಿವೆ.