ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಣದಿಂದ ತಪ್ಪಿಸಿಕೊಂಡಿದ್ದ ಮಕ್ಕಳು ಪೋಷಕರ ಮಡಿಲಿಗೆ

Last Updated 30 ನವೆಂಬರ್ 2022, 20:01 IST
ಅಕ್ಷರ ಗಾತ್ರ

ಬೆಂಗಳೂರು: ಪಶ್ಚಿಮ ಬಂಗಾಳದಿಂದ ಆಕಸ್ಮಿಕವಾಗಿ ತಪ್ಪಿಸಿಕೊಂಡು ಬಂಗಾರಪೇಟೆ ರೈಲು ನಿಲ್ದಾಣಕ್ಕೆ ಬಂದಿದ್ದ ಇಬ್ಬರು ಮಕ್ಕಳನ್ನು ರೈಲ್ವೆ ಪೊಲೀಸರು ರಕ್ಷಿಸಿ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ನೆರವಿನಿಂದ ಆ ಮಕ್ಕಳು ಪೋಷಕರ ಮಡಿಲು ಸೇರಿದ್ದಾರೆ.

ನವೆಂಬರ್‌ 28ರಂದು ಬಂಗಾರಪೇಟೆ ರೈಲ್ವೆ ನಿಲ್ದಾಣಕ್ಕೆ ಮಕ್ಕಳು ಬಂದಿದ್ದರು. ಪೊಲೀಸರು ಅವರನ್ನು ವಿಚಾರಿಸಿದಾಗ ಪಶ್ಚಿಮ ಬಂಗಾಳದ ಮೂಲದವರು ಎಂಬುದು ತಿಳಿದುಬಂತು.

ಬಳಿಕ ಅವರ ತಂದೆಯ ಮೊಬೈಲ್‌ ಸಂಖ್ಯೆ ಪತ್ತೆ ಮಾಡಿ ವಿಡಿಯೊ ಕಾಲ್‌ ಮಾಡಲಾಯಿತು. ಮಕ್ಕಳು ತಂದೆ–ತಾಯಿ ಪತ್ತೆ ಮಾಡಿದರು. ಪೋಷಕರನ್ನು ಕಾಡುಗೋಡಿ ಪೊಲೀಸ್‌ ಠಾಣೆಗೆ ಕರೆಸಿ ಮಕ್ಕಳನ್ನು ಸುರಕ್ಷಿತವಾಗಿ ಕಳುಹಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT