‘ರತನ್ ಅವರು ಮಹಾರಾಷ್ಟ್ರದ ನಿವಾಸಿ. ನಗರದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ನವರಾತ್ರಿ ಅಂಗವಾಗಿ ಮನೆಯಲ್ಲಿ ದುರ್ಗಾ ಮಾತೆ ಪೂಜಿಸಿದ್ದರು. ಬುಧವಾರ ಕುಟುಂಬದ ಐವರೊಂದಿಗೆ ಮೂರ್ತಿ ವಿಸರ್ಜನೆಗೆ ಕೆಂಗೇರಿಯ ಉತ್ತರಹಳ್ಳಿ ಮುಖ್ಯರಸ್ತೆಯ ಸಾವನ್ ದರ್ಬಾರ್ ಆಶ್ರಮದ ಮುಂಭಾಗದ ಸುಣಕಲ್ ಪಾಳ್ಯಕೆರೆಗೆ ತೆರಳಿದ್ದರು. ಆಗ ಸೋಮೇಶ್ (21) ಹಾಗೂ ಜಿತು (22) ಅವರು ನಾಪತ್ತೆ ಆಗಿದ್ದಾರೆ. ಉಳಿದ ಮೂವರು ಮಾತ್ರ ನೀರಿನಿಂದ ಹೊರಬಂದಿದ್ಧಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.