ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಬಿಜೆಪಿ ಮುಖಂಡರೊಬ್ಬರ ಕೊಲೆಗೆ ಯತ್ನ, ಇಬ್ಬರು ಎಂಜಿನಿಯರ್ ಅಮಾನತು

Last Updated 4 ಜೂನ್ 2022, 2:24 IST
ಅಕ್ಷರ ಗಾತ್ರ

ತುಮಕೂರು: ಬಿಜೆಪಿ ಮುಖಂಡರೊಬ್ಬರ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಲೋಕೋ ಪಯೋಗಿ ಇಲಾಖೆ ಇಬ್ಬರು ಸಹಾಯಕ ಎಂಜಿನಿಯರುಗಳನ್ನು ಅಮಾನತು ಮಾಡಲಾಗಿದೆ.

ತುಮಕೂರು ಲೋಕೋಪ ಯೋಗಿ ವೃತ್ತದ ಸಹಾಯಕ ಎಂಜಿನಿ ಯರ್ ಆರ್.ಶಂಭುಕುಮಾರ್ ಹಾಗೂ ಬೆಂಗಳೂರು ಕೆ.ಆರ್.ವೃತ್ತದ ಲೋಕೋಪಯೋಗಿ ಇಲಾಖೆಪಿಆರ್‌ಎಎಂಸಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್ ಎಂ.ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಶಂಭುಕುಮಾರ್, ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆ ಸೇರಿಕೊಂಡು ಬಿಜೆಪಿ ಎಸ್‌ಸಿ ಮೋರ್ಚಾ ತುಮ ಕೂರು ಜಿಲ್ಲಾ ಘಟಕದ ಅಧ್ಯಕ್ಷ ಓಂಕಾರೇಶ್ವರ ಅವರ ಕೊಲೆಗೆ ಬೆಂಗಳೂರಿನಲ್ಲಿ ಯತ್ನಿಸಿದ್ದರು. ಕಾರು ಹರಿಸಿ ಕೊಲೆ ಪ್ರಯತ್ನ ನಡೆಸಲಾಗಿತ್ತು. ಈ ಸಂಬಂಧ ಏಪ್ರಿಲ್ 12ರಂದು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಶ್ವಿನಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದೂರು ದಾಖಲಾಗುತ್ತಿದ್ದಂತೆ ಶಂಭುಕುಮಾರ್ ತಲೆ ಮರೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT