ಬೆಂಗಳೂರು: ಹೊಸಹಳ್ಳಿ ಮೆಟ್ರೊ ನಿಲ್ದಾಣ ಬಳಿ ಸ್ಕೂಟರ್ಗೆ ಜೋತುಬಿದ್ದ ವೃದ್ಧ ಮುತ್ತಪ್ಪ ಅವರನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಸ್ಕೂಟರ್ ಚಾಲಕ ಸಾಹಿಲ್ ವಿರುದ್ಧ ಎರಡು ಎಫ್ಐಆರ್ ದಾಖಲಾಗಿವೆ.
‘ಅಪಘಾತವನ್ನುಂಟು ಮಾಡಿ, ವೃದ್ಧರನ್ನು ಅಮಾನವೀಯವಾಗಿ ನಡೆಸಿಕೊಂಡಿರುವ ಸಾಹಿಲ್ ವಿರುದ್ಧ ವಿಜಯನಗರ ಸಂಚಾರ ಹಾಗೂ ಗೋವಿಂದರಾಜನಗರ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಿಸಲಾಗಿದೆ. ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.
ಸ್ಕೂಟರ್ಗೆ ಜೋತುಬಿದ್ದ ಚಾಲಕನ ಎಳೆದೊಯ್ದ ಸವಾರ
ಮಾಗಡಿ ರಸ್ತೆಯ ಹೊಸಹಳ್ಳಿ ಮೆಟ್ರೊ ನಿಲ್ದಾಣ ಬಳಿ ಸ್ಕೂಟರ್ಗೆ ಜೋತುಬಿದ್ದ ವ್ಯಕ್ತಿಯೊಬ್ಬರನ್ನು ದ್ವಿಚಕ್ರ ವಾಹನ ಸವಾರ ರಸ್ತೆಯಲ್ಲೇ ಎಳೆದೊಯ್ದಿದ್ದಾನೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.#Bangalore#MagadiRoad#CrimeNewspic.twitter.com/DO2NGbLB7X