ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು

Last Updated 22 ಜೂನ್ 2021, 7:23 IST
ಅಕ್ಷರ ಗಾತ್ರ

ಬೆಂಗಳೂರು: ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ವಿದ್ಯುತ್ ತಗುಲಿ‌ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ.

ರಾಯಚೂರಿನ ಕರಿಯಪ್ಪ (22) ಹಾಗೂ ನಾಗರಾಜು (19) ಮೃತರು.

‘ಒಂದು ವರ್ಷದಿಂದ ಒಜಾಸ್ ಕಂಪನಿಯವರು ಬಿಬಿಎಂಪಿ ವತಿಯಿಂದ ರಾಜಕಾಲುವೆ ಸ್ವಚ್ಚಗೊಳಿಸುವ ಕಾಮಗಾರಿಯಲ್ಲಿ ಇಬ್ಬರೂ ಕೆಲಸ ಮಾಡುತ್ತಿದ್ದರು. ಮಂಗಳವಾರ ಟಿ.ದಾಸರಹಳ್ಳಿ ಬಳಿ ಮಲ್ಲಸಂದ್ರ ರಾಜಕಾಲುವೆ ಕೆಲಸ ಮುಗಿಸಿಕೊಂಡು ತಾವು ವಾಸವಿದ್ದ ಎಚ್ ಎಸ್ ಆರ್ ಲೇಔಟ್‌ಗೆ ಹೋಗುವಾಗ ನಾಲ ರಸ್ತೆ ಬಳಿ ಕೆಲಸ ಮಾಡುತ್ತಿದ್ದ ತಮ್ಮ ಸಂಗಡಿಗರುನ್ನು ಕರೆದುಕೊಂಡು ಹೋಗಲು ಬಂದಿದ್ದರು ಆ ವೇಳೆಯಲ್ಲಿ ನಾಲಾರಸ್ತೆಯ ರಾಜ ಕಾಲುವೆ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದು ಅಲ್ಲಿ ಕಾಲುವೆಗೆ ಅಳವಡಿಸಿದ್ದ ವಿದ್ಯುತ್ ತಂತಿ‌ ತಗುಲಿ ಇಬ್ಬರೂ ಮೃತಪಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಶ್ಚಿಮ ‌ವಿಭಾಗ ಡಿಸಿಪಿ ಸಂಜೀವ್‌ ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT