<p><strong>ಬೆಂಗಳೂರು</strong>: ಗ್ರಾಮಾಂತರ ವ್ಯಾಪ್ತಿಯ ಇನ್ನೂ ಎರಡು ಪೊಲೀಸ್ ಠಾಣೆಗಳನ್ನು ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.</p>.<p>ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಹಾಗೂ ದೊಡ್ಡಬಳ್ಳಾಪುರ ಉಪ ವಿಭಾಗದ ರಾಜಾನುಕುಂಟೆ ಪೊಲೀಸ್ ಠಾಣೆಗಳನ್ನು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದೆ. ಈ ಎರಡೂ ಠಾಣೆಗಳನ್ನು ವಾಯವ್ಯ (ಪೀಣ್ಯ) ಉಪ ವಿಭಾಗಕ್ಕೆ ಸೇರ್ಪಡೆ ಮಾಡಲಾಗಿದೆ.</p>.<p>ಈ ಹಿಂದೆ ಹೊರವಲಯದ ಕೆಲವು ಠಾಣೆಗಳನ್ನು ನಗರ ವ್ಯಾಪ್ತಿಗೆ ಸೇರ್ಪಡೆ ಮಾಡುವಾಗ ಈ ಎರಡೂ ಠಾಣೆಗಳನ್ನು ಕೈಬಿಡಲಾಗಿತ್ತು. ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳನ್ನು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಸೇರಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಕಳೆದ ಆಗಸ್ಟ್ನಲ್ಲಿ ಪ್ರಸ್ತಾವ ಸಲ್ಲಿಸಿದ್ದರು.</p>.<p>ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ 40 ಹಳ್ಳಿಗಳು ಈಗಾಗಲೇ ಕಮಿಷನರೇಟ್ ವ್ಯಾಪ್ತಿಯಲ್ಲಿವೆ. ಹೊರವಲಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳಿಗೆ ಕಡಿವಾಣ ಹಾಕಲು ಈ ಠಾಣೆಗಳನ್ನು ಕಮಿಷನರೇಟ್ ವ್ಯಾಪ್ತಿಗೆ ಸೇರಿಸಬೇಕು ಎಂದು ಪ್ರಸ್ತಾವದಲ್ಲಿ ಉಲ್ಲೇಖಿಸಲಾಗಿತ್ತು.</p>.<p>ರಾಜಾನುಕುಂಟೆ ಠಾಣೆ ವ್ಯಾಪ್ತಿಯಲ್ಲಿ ಕಾಲೇಜುಗಳು ಹೆಚ್ಚಿವೆ. ವಿದೇಶಿ ಪ್ರಜೆಗಳು ಹೆಚ್ಚಾಗಿ ವಾಸ ಮಾಡುತ್ತಿದ್ದು, ಮನೆಗಳ್ಳತನ ಮತ್ತು ಡ್ರಗ್ಸ್ ಮಾರಾಟ ದಂಧೆಯೂ ನಡೆಯುತ್ತಿದೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಜನದಟ್ಟಣೆ, ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಕೀರ್ಣಗಳು, ವಸತಿ ಸಮುಚ್ಚಯಗಳಿವೆ. ಈ ಠಾಣೆಯನ್ನು ನಗರ ವ್ಯಾಪ್ತಿಗೆ ಸೇರ್ಪಡೆ ಮಾಡಿದರೆ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ತ್ವರಿತವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಅನುಕೂಲ ಆಗಲಿದೆ ಎಂದೂ ಪ್ರಸ್ತಾವದಲ್ಲಿ ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರಾಮಾಂತರ ವ್ಯಾಪ್ತಿಯ ಇನ್ನೂ ಎರಡು ಪೊಲೀಸ್ ಠಾಣೆಗಳನ್ನು ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.</p>.<p>ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಹಾಗೂ ದೊಡ್ಡಬಳ್ಳಾಪುರ ಉಪ ವಿಭಾಗದ ರಾಜಾನುಕುಂಟೆ ಪೊಲೀಸ್ ಠಾಣೆಗಳನ್ನು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದೆ. ಈ ಎರಡೂ ಠಾಣೆಗಳನ್ನು ವಾಯವ್ಯ (ಪೀಣ್ಯ) ಉಪ ವಿಭಾಗಕ್ಕೆ ಸೇರ್ಪಡೆ ಮಾಡಲಾಗಿದೆ.</p>.<p>ಈ ಹಿಂದೆ ಹೊರವಲಯದ ಕೆಲವು ಠಾಣೆಗಳನ್ನು ನಗರ ವ್ಯಾಪ್ತಿಗೆ ಸೇರ್ಪಡೆ ಮಾಡುವಾಗ ಈ ಎರಡೂ ಠಾಣೆಗಳನ್ನು ಕೈಬಿಡಲಾಗಿತ್ತು. ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳನ್ನು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಸೇರಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಕಳೆದ ಆಗಸ್ಟ್ನಲ್ಲಿ ಪ್ರಸ್ತಾವ ಸಲ್ಲಿಸಿದ್ದರು.</p>.<p>ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ 40 ಹಳ್ಳಿಗಳು ಈಗಾಗಲೇ ಕಮಿಷನರೇಟ್ ವ್ಯಾಪ್ತಿಯಲ್ಲಿವೆ. ಹೊರವಲಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳಿಗೆ ಕಡಿವಾಣ ಹಾಕಲು ಈ ಠಾಣೆಗಳನ್ನು ಕಮಿಷನರೇಟ್ ವ್ಯಾಪ್ತಿಗೆ ಸೇರಿಸಬೇಕು ಎಂದು ಪ್ರಸ್ತಾವದಲ್ಲಿ ಉಲ್ಲೇಖಿಸಲಾಗಿತ್ತು.</p>.<p>ರಾಜಾನುಕುಂಟೆ ಠಾಣೆ ವ್ಯಾಪ್ತಿಯಲ್ಲಿ ಕಾಲೇಜುಗಳು ಹೆಚ್ಚಿವೆ. ವಿದೇಶಿ ಪ್ರಜೆಗಳು ಹೆಚ್ಚಾಗಿ ವಾಸ ಮಾಡುತ್ತಿದ್ದು, ಮನೆಗಳ್ಳತನ ಮತ್ತು ಡ್ರಗ್ಸ್ ಮಾರಾಟ ದಂಧೆಯೂ ನಡೆಯುತ್ತಿದೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಜನದಟ್ಟಣೆ, ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಕೀರ್ಣಗಳು, ವಸತಿ ಸಮುಚ್ಚಯಗಳಿವೆ. ಈ ಠಾಣೆಯನ್ನು ನಗರ ವ್ಯಾಪ್ತಿಗೆ ಸೇರ್ಪಡೆ ಮಾಡಿದರೆ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ತ್ವರಿತವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಅನುಕೂಲ ಆಗಲಿದೆ ಎಂದೂ ಪ್ರಸ್ತಾವದಲ್ಲಿ ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>