<p><strong>ಬೆಂಗಳೂರು:</strong> ನ್ಯೂ ಬಿಇಎಲ್ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಬಿಬಿಎಂಪಿಯ ಇಬ್ಬರು ಎಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ.</p>.<p>ಸಹಾಯಕ ಕಾರ್ಯಪಾಲಕ ಎಂಜಿನಿ ಯರ್ ಎಂ.ಸಿ.ಕೃಷ್ಣೇಗೌಡ ಹಾಗೂ ಬಿಬಿಎಂಪಿ ರಸ್ತೆ ಅಭಿವೃದ್ಧಿ ವಿಭಾಗದ (ಪಶ್ಚಿಮ ವಿಭಾಗ) ವಿಷಕಂಠ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.</p>.<p>ಕಳೆದ ತಿಂಗಳು ನಡೆದಿದ್ದ ಇಲಾಖೆಗಳ ಆಂತರಿಕ ಸಮನ್ವಯ ಸಮಿತಿ ಸಭೆಯಲ್ಲಿ ಸಂಚಾರ ಪೊಲೀಸರು ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.</p>.<p>ರಸ್ತೆ ಪರಿಶೀಲನೆ ವೇಳೆ ಲೋಪ ಕಂಡುಬಂದಿತ್ತು. ಮೂಲಸೌಕರ್ಯದಿಂದ ಕೆಲವು ಸೂಚನೆ ನೀಡಿದ್ದರೂ ಅಧಿಕಾರಿಗಳು ಪಾಲನೆ ಮಾಡಿರಲಿಲ್ಲ. ಕಳಪೆ ಕಾಮಗಾರಿಯ ದೂರನ್ನು ಗಂಭೀರವಾಗಿ ಪರಿಗಣಿಸದ ಕಾರಣಕ್ಕೆ ಅಮಾನತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನ್ಯೂ ಬಿಇಎಲ್ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಬಿಬಿಎಂಪಿಯ ಇಬ್ಬರು ಎಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ.</p>.<p>ಸಹಾಯಕ ಕಾರ್ಯಪಾಲಕ ಎಂಜಿನಿ ಯರ್ ಎಂ.ಸಿ.ಕೃಷ್ಣೇಗೌಡ ಹಾಗೂ ಬಿಬಿಎಂಪಿ ರಸ್ತೆ ಅಭಿವೃದ್ಧಿ ವಿಭಾಗದ (ಪಶ್ಚಿಮ ವಿಭಾಗ) ವಿಷಕಂಠ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.</p>.<p>ಕಳೆದ ತಿಂಗಳು ನಡೆದಿದ್ದ ಇಲಾಖೆಗಳ ಆಂತರಿಕ ಸಮನ್ವಯ ಸಮಿತಿ ಸಭೆಯಲ್ಲಿ ಸಂಚಾರ ಪೊಲೀಸರು ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.</p>.<p>ರಸ್ತೆ ಪರಿಶೀಲನೆ ವೇಳೆ ಲೋಪ ಕಂಡುಬಂದಿತ್ತು. ಮೂಲಸೌಕರ್ಯದಿಂದ ಕೆಲವು ಸೂಚನೆ ನೀಡಿದ್ದರೂ ಅಧಿಕಾರಿಗಳು ಪಾಲನೆ ಮಾಡಿರಲಿಲ್ಲ. ಕಳಪೆ ಕಾಮಗಾರಿಯ ದೂರನ್ನು ಗಂಭೀರವಾಗಿ ಪರಿಗಣಿಸದ ಕಾರಣಕ್ಕೆ ಅಮಾನತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>