ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರ ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Last Updated 27 ಆಗಸ್ಟ್ 2022, 19:33 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಪಾಲರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಆಮಿಷವೊಡ್ಡಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನಗರದ ಜ್ಞಾನ ಪ್ರಕಾಶ್ ಹಾಗೂ ದೆಹಲಿಯ ಗಿರಿಧರ್ ಝಾ ಬಂಧಿತರು. ಇಂಡಿಯನ್ ಜರ್ನಲಿಸ್ಟ್ ಕಾಂಪೆಂಡಿಯಂ (ಐಜೆಸಿ) ಸಂಸ್ಥೆ
ಸ್ಥಾಪಿಸಿಕೊಂಡಿದ್ದ ಆರೋಪಿಗಳು, ಅದರ ಮೂಲಕ ಪ್ರಶಸ್ತಿ–ಪುರಸ್ಕಾರ ನೀಡುವ ಆಮಿಷವೊಡ್ಡಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದರೆಂಬ ಮಾಹಿತಿ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಿಜೆಪಿ ಮುಖಂಡರೂ ಆಗಿರುವ ಪೀಣ್ಯ ಕೈಗಾರಿಕಾ ಪ್ರದೇಶದ ದೂರು
ದಾರ ವೆಂಕಟೇಶ್ ಅವರನ್ನು ಸಂಪರ್ಕಿ
ಸಿದ್ದ ಆರೋಪಿಗಳು, ‘ಐಜೆಸಿ ಸಂಸ್ಥೆಯ ಪರವಾಗಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಂದ ಆಗಸ್ಟ್ 16ರಂದು ಬೆಳಿಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಶಸ್ತಿ ಕೊಡಿಸುತ್ತೇವೆ. ನೀವು ನಮ್ಮ ಸಂಸ್ಥೆಗೆ ದೇಣಿಗೆ ನೀಡಬೇಕು’ ಎಂದಿದ್ದರು. ಅದನ್ನು ನಂಬಿದ್ದ ವೆಂಕಟೇಶ್, ₹ 1 ಲಕ್ಷ ನೀಡಿದ್ದರು.’

‘ಹಣ ಪಡೆದಿದ್ದ ಆರೋಪಿಗಳು, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆಂದು ದೂರುದಾರ ವೆಂಕಟೇಶ್ ಅವರನ್ನು ಆಗಸ್ಟ್ 16ರಂದು ರಾಜಭವನಕ್ಕೆ ಕರೆಸಿದ್ದರು. ಆದರೆ, ಯಾವುದೇ ಸಮಾರಂಭ ನಡೆದಿರಲಿಲ್ಲ. ಸ್ವಾತಂತ್ರ್ಯೋತ್ಸವ ಶುಭಾಶಯ ಕೋರಲು ರಾಜ್ಯಪಾಲರು ನೀಡಿದ್ದ ಸಮಯ ಅದಾಗಿತ್ತಷ್ಟೆ. ವಂಚನೆ ಗಮನಕ್ಕೆ ಬರುತ್ತಿದ್ದಂತೆ ವೆಂಕಟೇಶ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ಮೂಲಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT