ಬೊಮ್ಮನಹಳ್ಳಿ ಸಿಲಿಂಡರ್ ಸ್ಫೋಟ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಳಿಗ್ಗೆ 11: 45ರ ಸುಮಾರಿಗೆ ಚಾಮರಾಜಪೇಟೆ ಬಳಿಯ ಲಾರಿ ದುರಸ್ತಿ ಅಂಗಡಿಯಲ್ಲಿಟ್ಟಿದ್ದ ಪಟಾಕಿಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನ ಮನೋಹರ್, ಅಸ್ಲಂ ಎಂದು ಗುರುತಿಸಲಾಗಿದ್ದು ಹಲವರು ಗಾಯಗೊಂಡಿದ್ದಾರೆ.