<p><strong>ಬೆಂಗಳೂರು:</strong> ನಗರದ ಮಲ್ಲೇಶ್ವರ ಹಾಗೂ ಮಡಿವಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ವೃದ್ಧೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಮಹಾಲಕ್ಷ್ಮಿ ಲೇಔಟ್ ನಿವಾಸಿ ಆಶಾರಾಣಿ (62) ಹಾಗೂ ಮಾಲೂರಿನ ಹನುಮಂತ (25) ಮೃತರು.</p>.<p><strong>ಮೆಟ್ರೊ ನಿಲ್ದಾಣ ಎದುರು ಅಪಘಾತ:</strong> ‘ಆಶಾರಾಣಿ ಅವರು ಬೇರೆ ಊರಿಗೆ ತೆರಳಲು ಶನಿವಾರ ಬೆಳಿಗ್ಗೆ 5.45 ಗಂಟೆ ಸುಮಾರಿಗೆ ಮಹಾಲಕ್ಷ್ಮಿ ಲೇಔಟ್ ಮೆಟ್ರೊ ನಿಲ್ದಾಣ ಬಳಿ ಬಂದಿದ್ದರು. ಅವರು ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು’ ಎಂದು ಮಲ್ಲೇಶ್ವರ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>‘ತೀವ್ರ ಗಾಯಗೊಂಡು ಆಶಾರಾಣಿ ಮೃತಪಟ್ಟಿದ್ದಾರೆ. ಅಪಘಾತದ ನಂತರ ಚಾಲಕ ವಾಹನದ ಸಮೇತ ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.</p>.<p><strong>ಇ–ಕಾಮರ್ಸ್ ಕಂಪನಿ ಉದ್ಯೋಗಿ:</strong> ‘ಇ– ಕಾಮರ್ಸ್ ಕಂಪನಿಯೊಂದರ ನೌಕರ ಹನುಮಂತ, ಶುಕ್ರವಾರ ರಾತ್ರಿ 7.30ರ ವೇಳೆಗೆ ಎನ್ಜಿಆರ್ ಬಡಾವಣೆ 3ನೇ ಮುಖ್ಯರಸ್ತೆಯಲ್ಲಿ ಬೈಕ್ನಲ್ಲಿ ಹೊರಟಿದ್ದರು’ ಎಂದು ಮಡಿವಾಳ ಸಂಚಾರ ಪೊಲೀಸರು ಹೇಳಿದರು.</p>.<p>‘ಇನ್ನೊಂದು ಬೈಕ್ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಉರುಳಿಬಿದ್ದ ಹನುಮಂತ ಅವರಿಗೆ ತೀವ್ರ ಪೆಟ್ಟಾಗಿದೆ.ಅಪಘಾತಕ್ಕೆ ಕಾರಣವಾದ ಸವಾರ, ಬೈಕ್ ಸಮೇತ ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಮಲ್ಲೇಶ್ವರ ಹಾಗೂ ಮಡಿವಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ವೃದ್ಧೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಮಹಾಲಕ್ಷ್ಮಿ ಲೇಔಟ್ ನಿವಾಸಿ ಆಶಾರಾಣಿ (62) ಹಾಗೂ ಮಾಲೂರಿನ ಹನುಮಂತ (25) ಮೃತರು.</p>.<p><strong>ಮೆಟ್ರೊ ನಿಲ್ದಾಣ ಎದುರು ಅಪಘಾತ:</strong> ‘ಆಶಾರಾಣಿ ಅವರು ಬೇರೆ ಊರಿಗೆ ತೆರಳಲು ಶನಿವಾರ ಬೆಳಿಗ್ಗೆ 5.45 ಗಂಟೆ ಸುಮಾರಿಗೆ ಮಹಾಲಕ್ಷ್ಮಿ ಲೇಔಟ್ ಮೆಟ್ರೊ ನಿಲ್ದಾಣ ಬಳಿ ಬಂದಿದ್ದರು. ಅವರು ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು’ ಎಂದು ಮಲ್ಲೇಶ್ವರ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>‘ತೀವ್ರ ಗಾಯಗೊಂಡು ಆಶಾರಾಣಿ ಮೃತಪಟ್ಟಿದ್ದಾರೆ. ಅಪಘಾತದ ನಂತರ ಚಾಲಕ ವಾಹನದ ಸಮೇತ ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.</p>.<p><strong>ಇ–ಕಾಮರ್ಸ್ ಕಂಪನಿ ಉದ್ಯೋಗಿ:</strong> ‘ಇ– ಕಾಮರ್ಸ್ ಕಂಪನಿಯೊಂದರ ನೌಕರ ಹನುಮಂತ, ಶುಕ್ರವಾರ ರಾತ್ರಿ 7.30ರ ವೇಳೆಗೆ ಎನ್ಜಿಆರ್ ಬಡಾವಣೆ 3ನೇ ಮುಖ್ಯರಸ್ತೆಯಲ್ಲಿ ಬೈಕ್ನಲ್ಲಿ ಹೊರಟಿದ್ದರು’ ಎಂದು ಮಡಿವಾಳ ಸಂಚಾರ ಪೊಲೀಸರು ಹೇಳಿದರು.</p>.<p>‘ಇನ್ನೊಂದು ಬೈಕ್ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಉರುಳಿಬಿದ್ದ ಹನುಮಂತ ಅವರಿಗೆ ತೀವ್ರ ಪೆಟ್ಟಾಗಿದೆ.ಅಪಘಾತಕ್ಕೆ ಕಾರಣವಾದ ಸವಾರ, ಬೈಕ್ ಸಮೇತ ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>