ಮುಂಜಾನೆ 4.30ರ ಸಮಯದಲ್ಲಿ ಇಬ್ಬರೂ ಕಾರಿನಲ್ಲಿ ಅಗ್ರಹಾರದ ಕಡೆಗೆ ತೆರಳುತ್ತಿದ್ದರು. ಕಾರ್ತಿಕ್ ಕಾರು ಚಾಲನೆ ಮಾಡುತ್ತಿದ್ದರು. ವೇಗವಾಗಿ ತೆರಳುತ್ತಿದ್ದ ಕಾರು, ಸಿಲ್ಕ್ ಬೋರ್ಡ್ ಬಳಿ ನಿಯಂತ್ರಣ ಕಳೆದುಕೊಂಡು ವಿಭಜಕಕ್ಕೆ ಡಿಕ್ಕಿಯಾಗಿದೆ. ಬಳಿಕ ಎದುರು ಬರುತ್ತಿದ್ದ ತಮಿಳುನಾಡಿನ ಬಸ್ಗೂ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.