<p><strong>ಬೆಂಗಳೂರು: </strong>ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಆನಂದ್ ಅಲಿಯಾಸ್ ರಾಮಾಚಾರಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಮೈಸೂರು ರಸ್ತೆಯ ಬಾಪೂಜಿನಗರ ನಿವಾಸಿ ಆನಂದ್, ಈ ಹಿಂದೆಯೂ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ. ಆತನಿಂದ ₹ 12 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪಶ್ಚಿಮ ವಿಭಾಗ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು ಕಳುವಾದ ಬಗ್ಗೆ ದೂರುಗಳು ಬಂದಿದ್ದವು. ಪ್ರಕರಣ ಭೇದಿಸಲು ವಿಶೇಷ ತಂಡ ರಚಿಸಲಾಗಿತ್ತು. ಮೇ 18ರಂದು ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ಆರೋಪಿ ಆನಂದ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.</p>.<p>‘ಬ್ಯಾಟರಾಯನಪುರ, ಜ್ಞಾನಭಾರತಿ, ಚಂದ್ರಾ ಲೇಔಟ್, ರಾಜಾಜಿನಗರ, ಪುಟ್ಟೇನಹಳ್ಳಿ, ಅಶೋಕನಗರ, ಬ್ಯಾಡರಹಳ್ಳಿ, ಜಗಜೀವನ್ರಾಮ್ ನಗರ, ಸಂಪಿಗೆಹಳ್ಳಿ, ಕಾಟನ್ಪೇಟೆ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ವಾಹನ ಕಳ್ಳತನ ಮಾಡಿದ್ದ. 20 ವಾಹನಗಳ ಪೈಕಿ 11 ವಾಹನಗಳ ಮಾಲೀಕರು ಪತ್ತೆಯಾಗಿದ್ದಾರೆ. ಇನ್ನುಳಿದ 9 ವಾಹನಗಳ ಮಾಲೀಕರನ್ನು ಹುಡುಕುತ್ತಿದ್ದೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಆನಂದ್ ಅಲಿಯಾಸ್ ರಾಮಾಚಾರಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಮೈಸೂರು ರಸ್ತೆಯ ಬಾಪೂಜಿನಗರ ನಿವಾಸಿ ಆನಂದ್, ಈ ಹಿಂದೆಯೂ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ. ಆತನಿಂದ ₹ 12 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪಶ್ಚಿಮ ವಿಭಾಗ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು ಕಳುವಾದ ಬಗ್ಗೆ ದೂರುಗಳು ಬಂದಿದ್ದವು. ಪ್ರಕರಣ ಭೇದಿಸಲು ವಿಶೇಷ ತಂಡ ರಚಿಸಲಾಗಿತ್ತು. ಮೇ 18ರಂದು ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ಆರೋಪಿ ಆನಂದ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.</p>.<p>‘ಬ್ಯಾಟರಾಯನಪುರ, ಜ್ಞಾನಭಾರತಿ, ಚಂದ್ರಾ ಲೇಔಟ್, ರಾಜಾಜಿನಗರ, ಪುಟ್ಟೇನಹಳ್ಳಿ, ಅಶೋಕನಗರ, ಬ್ಯಾಡರಹಳ್ಳಿ, ಜಗಜೀವನ್ರಾಮ್ ನಗರ, ಸಂಪಿಗೆಹಳ್ಳಿ, ಕಾಟನ್ಪೇಟೆ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ವಾಹನ ಕಳ್ಳತನ ಮಾಡಿದ್ದ. 20 ವಾಹನಗಳ ಪೈಕಿ 11 ವಾಹನಗಳ ಮಾಲೀಕರು ಪತ್ತೆಯಾಗಿದ್ದಾರೆ. ಇನ್ನುಳಿದ 9 ವಾಹನಗಳ ಮಾಲೀಕರನ್ನು ಹುಡುಕುತ್ತಿದ್ದೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>