‘ಆರೋಪಿ ಬಾಲರಾಜ್, ಪಿ.ಜಿ.ಹಳ್ಳಿ ವೃತ್ತದಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ. ಅದೇ ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿ, ಆರೋಪಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದರು. ವಾಹನದ ದಾಖಲೆ ಇಲ್ಲದಿದ್ದರಿಂದ, ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಯು ಅಪರಾಧ ಹಿನ್ನೆಲೆಯುಳ್ಳವ ಎಂಬುದು ಗೊತ್ತಾಯಿತು’ ಎಂದು ತಿಳಿಸಿದರು.