‘ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ಕೂಟರ್ ಮಾರಾಟ ಮಾಡಲು ಮುಂದಾಗಿರುವ ಕುರಿತು ಇದೇ 20ರ ಸಂಜೆ ಮಾಹಿತಿ ಲಭಿಸಿತ್ತು. ಆರೋಪಿಯನ್ನು ಬಂಧಿಸಲು ಹೋದಾಗ ಪರಾರಿಯಾಗಲು ಪ್ರಯತ್ನಿಸಿದ್ದ. ಹಿಡಿದು ವಿಚಾರಿಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಈತನ ಬಂಧನದಿಂದ ಹೆಬ್ಬಾಳ, ಕೆ.ಆರ್.ಪುರ ಹಾಗೂ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ’ ಎಂದು ಮಾಹಿತಿ ನೀಡಿದ್ದಾರೆ.