<p><strong>ಕೆ.ಆರ್.ಪುರ:</strong> ಶಿವರಾತ್ರಿ ಹಬ್ಬದ ಅಂಗವಾಗಿ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಹಿಂದಿನಿಂದ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಂಚಾರ ಠಾಣೆ ವ್ಯಾಪ್ತಿಯ ಕಿತ್ತಗನೂರಿನ ಹಳೆಹಳ್ಳಿಯಲ್ಲಿ ನಡೆದಿದೆ.</p>.<p>ತ್ರಿಶೂಲ್ ಮೃತ ಮಗು.</p>.<p>ಸಂಬಂಧಿಕರೊಂದಿಗೆ ಮಾರಗೊಂಡನಹಳ್ಳಿಯ ಶಿವನ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ದ್ವಿಚಕ್ರ ವಾಹನದಲ್ಲಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. </p>.<p>ಹಿಂದಿನಿಂದ ಬಂದ ಇನೊವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಕೆಳಗಡೆ ಬಿದ್ದಿದೆ. ಈ ವೇಳೆ ರಸ್ತೆ ಮೇಲೆ ಮಗು ಬಿದ್ದಿತ್ತು. ಆಗ ಕಾರಿನ ಚಕ್ರಗಳು ಮಗುವಿನ ಮೇಲೆ ಹರಿದಿವೆ. </p>.<p>ಚಿಕ್ಕಬಳ್ಳಾಪುರದ ಹರೀಶ್ ಹಾಗೂ ಅನು ದಂಪತಿ ಪುತ್ರ ತ್ರಿಶೂಲ್. ದಂಪತಿ ಮಹಾರಾಷ್ಟ್ರದ ಉಜ್ಜೈನಿಗೆ ಪ್ರವಾಸಕ್ಕೆ ತೆರಳುವ ನಿಮಿತ್ತ ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ತೆರಳಿದ್ದರು.</p>.<p>ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<p>ಕೆ.ಆರ್.ಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಅಪಘಾತ ಸಂಭವಿಸಲು ರಸ್ತೆ ದುಃಸ್ಥಿತಿಯೇ ಕಾರಣ ಎಂದು ಸ್ಥಳೀಯ ನಿವಾಸಿಗಳು ಹಳೇಹಳ್ಳಿಯಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಿತ್ತಗನೂರು ಪಂಚಾಯತಿ ಕಾರ್ಯದರ್ಶಿ ಸ್ಥಳಕ್ಕೆ ಬಂದು ಶೀಘ್ರದಲ್ಲೇ ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿದ ಮೇಲೆ ಪ್ರತಿಭಟನೆ ಕೈಬಿಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಶಿವರಾತ್ರಿ ಹಬ್ಬದ ಅಂಗವಾಗಿ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಹಿಂದಿನಿಂದ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಂಚಾರ ಠಾಣೆ ವ್ಯಾಪ್ತಿಯ ಕಿತ್ತಗನೂರಿನ ಹಳೆಹಳ್ಳಿಯಲ್ಲಿ ನಡೆದಿದೆ.</p>.<p>ತ್ರಿಶೂಲ್ ಮೃತ ಮಗು.</p>.<p>ಸಂಬಂಧಿಕರೊಂದಿಗೆ ಮಾರಗೊಂಡನಹಳ್ಳಿಯ ಶಿವನ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ದ್ವಿಚಕ್ರ ವಾಹನದಲ್ಲಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. </p>.<p>ಹಿಂದಿನಿಂದ ಬಂದ ಇನೊವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಕೆಳಗಡೆ ಬಿದ್ದಿದೆ. ಈ ವೇಳೆ ರಸ್ತೆ ಮೇಲೆ ಮಗು ಬಿದ್ದಿತ್ತು. ಆಗ ಕಾರಿನ ಚಕ್ರಗಳು ಮಗುವಿನ ಮೇಲೆ ಹರಿದಿವೆ. </p>.<p>ಚಿಕ್ಕಬಳ್ಳಾಪುರದ ಹರೀಶ್ ಹಾಗೂ ಅನು ದಂಪತಿ ಪುತ್ರ ತ್ರಿಶೂಲ್. ದಂಪತಿ ಮಹಾರಾಷ್ಟ್ರದ ಉಜ್ಜೈನಿಗೆ ಪ್ರವಾಸಕ್ಕೆ ತೆರಳುವ ನಿಮಿತ್ತ ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ತೆರಳಿದ್ದರು.</p>.<p>ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<p>ಕೆ.ಆರ್.ಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಅಪಘಾತ ಸಂಭವಿಸಲು ರಸ್ತೆ ದುಃಸ್ಥಿತಿಯೇ ಕಾರಣ ಎಂದು ಸ್ಥಳೀಯ ನಿವಾಸಿಗಳು ಹಳೇಹಳ್ಳಿಯಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಿತ್ತಗನೂರು ಪಂಚಾಯತಿ ಕಾರ್ಯದರ್ಶಿ ಸ್ಥಳಕ್ಕೆ ಬಂದು ಶೀಘ್ರದಲ್ಲೇ ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿದ ಮೇಲೆ ಪ್ರತಿಭಟನೆ ಕೈಬಿಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>