‘ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆಯಲ್ಲಿ ಕಸ ವಿಲೇವಾರಿಯಿಂದ ಹಾನಿಗೊಳಗಾದ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವನ್ನು ನಂತರ ₹ 584.34 ಕೋಟಿಗೆ ಕಡಿತಗೊಳಿಸಲಾಗಿದೆ. ನಂತರ ಶಾಸಕರಾದ ಅನಿತಾ ಕುಮಾರಸ್ವಾಮಿ, ಶರವಣ, ಎಂ.ರಮೇಶ್ ಗೌಡ, ನಿಸರ್ಗ ನಾರಾಯಣಸ್ವಾಮಿ ಎ.ಮಂಜುನಾಥ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಮನವಿ ಪತ್ರಗಳನ್ನು ಆಧರಿಸಿ ಮುಖ್ಯಮಂತ್ರಿಗಳ ನವಬೆಂಗಳೂರು ಯೋಜನೆಯಡಿ ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕರ್ತವ್ಯಲೋಪ ಎಸಗಿಲ್ಲ’ ಎಂದು ರಾಕೇಶ್ ಸಿಂಗ್ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.