ಸಂಘದ ಗೌರವ ಕಾರ್ಯದರ್ಶಿ ಕೆ.ರಾಧಾಕೃಷ್ಣ, ‘ಸಂಘದ ವಜ್ರ ಮಹೋತ್ಸವದ ಸಂದರ್ಭದಲ್ಲಿ ಸಂಘವು ಹಿಂದೆಂದಿಗಿಂತಲೂ ಹೆಚ್ಚು ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಮುನ್ನಡೆಯುತ್ತಿದೆ. ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಆರೋಗ್ಯ, ವೃತ್ತಿಕೌಶಲ, ಕಲಾಕೌಶಲ ತರಬೇತಿಗಳಲ್ಲಿ ಹೆಚ್ಚಿನ ಜನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.