<p><strong>ಬೆಂಗಳೂರು</strong>: ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ರಸ್ತೆ ಬದಿ ಶೆಡ್ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದು, ಮಚ್ಚಿನಿಂದ ಕಾಲಿಗೆ ಶನಿವಾರ ತಡರಾತ್ರಿ ಹೊಡೆಯಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಸುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.</p>.<p>ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಹಾಗೂ ಬಿಜೆಪಿ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ದುಷ್ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.</p>.<p>ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ಹಾಗೂ ಕಾಟನ್ಪೇಟೆ ಠಾಣೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಘಟನೆ ಸಂಬಂಧ ಹಸು ಮಾಲೀಕ ಕರ್ಣ ಅವರು ನೀಡಿದ ದೂರಿನ ಮೇರೆಗೆ ಬಿಎನ್ಎಸ್ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಅಡಿ ಕಾಟನ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<p>‘ಈ ಪ್ರದೇಶದಲ್ಲಿ ಹಲವರು ರಸ್ತೆಯಲ್ಲಿ ಹಸುಗಳನ್ನು ಕಟ್ಟುತ್ತಾರೆ. ಗಾಯಗೊಂಡ ಹಸುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ ಹಾಗೂ ಸ್ಥಳೀಯರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ತಿಳಿಸಿದರು. </p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಪಿ.ಸಿ.ಮೋಹನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಹಸುವಿನ ಮಾಲೀಕ ಕರ್ಣ ಅವರಿಗೆ ಸಾಂತ್ವನ ಹೇಳಿದರು.</p>.<div><blockquote>ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ.</blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<p>‘ಹಲವು ದಶಕಗಳಿಂದ ಈ ಪ್ರದೇಶದಲ್ಲಿ ಪಶು ಆಸ್ಪತ್ರೆ ಇದೆ. ಆಸ್ಪತ್ರೆಗೆ ಸೇರಿದ ಜಮೀನನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಸ್ಪತ್ರೆ ಮುಚ್ಚುವುದರ ವಿರುದ್ಧ ಹಸುಗಳ ಮಾಲೀಕ ಕರ್ಣ ಹಾಗೂ ಇತರರು ವಿರೋಧ ವ್ಯಕ್ತಪಡಿಸಿದ್ದರು. ಹಾಗಾಗಿ ಈ ಕೃತ್ಯವೆಸಗಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ನನ್ನ ಎಂಟು ಹಸುಗಳ ಪೈಕಿ ಮೂರು ಹಸುಗಳ ಕೆಚ್ಚಲು ಕೊಯ್ದು, ಮಚ್ಚಿನಿಂದ ಕಾಲುಗಳಿಗೆ ಹೊಡೆದು ಗಾಯಗೊಳಿಸಲಾಗಿದೆ. ಮೂಕ ಪ್ರಾಣಿಗಳು ರಾತ್ರಿಯಿಂದ ನರಳಾಡಿವೆ. ನನ್ನನ್ನು ಸಾಯಿಸುವ ಬದಲು ಮೂಕ ಪ್ರಾಣಿಗಳ ಮೇಲೆ ದಾಳಿ ನಡೆಸಿದ್ದಾರೆ. ನನಗೆ ಹೇಳಿದ್ದರೆ ಈ ಜಾಗವನ್ನೇ ಬಿಟ್ಟು ಹೋಗುತ್ತಿದ್ದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಅವರನ್ನು ಹಿಡಿದು ನಮಗೆ ಒಪ್ಪಿಸಿ, ಬುದ್ಧಿ ಕಲಿಸುತ್ತೇವೆ’ ಎಂದು ಕರ್ಣ ಹೇಳಿದರು.</p>.<p><strong>ಕಣ್ಣೀರಿಟ್ಟ ಸ್ಥಳೀಯರು:</strong></p>.<p>‘ಈ ಪ್ರದೇಶದಲ್ಲಿ ಮಾದಕ ವ್ಯಸನಿಗಳು, ಪುಂಡರ ಹಾವಳಿ ಮಿತಿ ಮೀರುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ವಿಫಲರಾಗಿದ್ದಾರೆ. ಮೂಕ ಪ್ರಾಣಿಗಳ ಮೇಲೆ ವಿಕೃತಿ ಮೆರೆದಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಮೂಕಪ್ರಾಣಿಗಳ ನೋವು ಕಂಡು ಕಣ್ಣೀರಿಟ್ಟರು.</p>.<p>‘ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ. ಘಟನಾ ಸ್ಥಳದಲ್ಲಿ ಎಲ್ಲಿಯೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಸರ್ಕಾರ, ಪೊಲೀಸ್ ಇಲಾಖೆ ಸತ್ತುಹೋಗಿದೆ. ಈ ಪ್ರದೇಶದಲ್ಲಿ ಮಾದಕ ವ್ಯಸನಿಗಳ ಕಾಟ ಮಿತಿಮೀರಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದು ಪಿ.ಸಿ.ಮೋಹನ್ ಆಗ್ರಹಿಸಿದರು.</p>.<p>‘ಒಂದು ಹಸು 20 ಲೀಟರ್ ಹಾಲು ನೀಡುತ್ತಿತ್ತು. ಈಗ ಯಾವುದೇ ಹಸು ಬದುಕುವ ಸ್ಥಿತಿಯಲ್ಲೇ ಇಲ್ಲ. ಹಸು ಮಾಲೀಕರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ನೀಡುತ್ತಿದ್ದೇನೆ. ಸರ್ಕಾರ ಕೂಡ ನೆರವು ನೀಡಬೇಕು’ ಎಂದು ಆರ್.ಅಶೋಕ ಹೇಳಿದರು.<br><br>‘ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p><strong>ಹಸು ಕೊಡಿಸಿದ ಸಚಿವ ಜಮೀರ್</strong></p><p>ಸ್ಥಳೀಯ ಶಾಸಕರೂ ಆಗಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಟನ್ ಪೇಟೆ ಪಶು ಆಸ್ಪತ್ರೆಗೆ ಭೇಟಿ ನೀಡಿ ಹಸುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.</p><p>‘ನೀಡಿದ್ದ ಭರವಸೆಯಂತೆ ಕರ್ಣ ಅವರಿಗೆ ಭಾನುವಾರವೇ ಮೂರು ಹಸುಗಳನ್ನು ಕೊಡಿಸಿದ್ದಾರೆ’ ಎಂದು ಸಚಿವರ ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ರಸ್ತೆ ಬದಿ ಶೆಡ್ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದು, ಮಚ್ಚಿನಿಂದ ಕಾಲಿಗೆ ಶನಿವಾರ ತಡರಾತ್ರಿ ಹೊಡೆಯಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಸುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.</p>.<p>ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಹಾಗೂ ಬಿಜೆಪಿ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ದುಷ್ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.</p>.<p>ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ಹಾಗೂ ಕಾಟನ್ಪೇಟೆ ಠಾಣೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಘಟನೆ ಸಂಬಂಧ ಹಸು ಮಾಲೀಕ ಕರ್ಣ ಅವರು ನೀಡಿದ ದೂರಿನ ಮೇರೆಗೆ ಬಿಎನ್ಎಸ್ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಅಡಿ ಕಾಟನ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<p>‘ಈ ಪ್ರದೇಶದಲ್ಲಿ ಹಲವರು ರಸ್ತೆಯಲ್ಲಿ ಹಸುಗಳನ್ನು ಕಟ್ಟುತ್ತಾರೆ. ಗಾಯಗೊಂಡ ಹಸುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ ಹಾಗೂ ಸ್ಥಳೀಯರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ತಿಳಿಸಿದರು. </p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಪಿ.ಸಿ.ಮೋಹನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಹಸುವಿನ ಮಾಲೀಕ ಕರ್ಣ ಅವರಿಗೆ ಸಾಂತ್ವನ ಹೇಳಿದರು.</p>.<div><blockquote>ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ.</blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<p>‘ಹಲವು ದಶಕಗಳಿಂದ ಈ ಪ್ರದೇಶದಲ್ಲಿ ಪಶು ಆಸ್ಪತ್ರೆ ಇದೆ. ಆಸ್ಪತ್ರೆಗೆ ಸೇರಿದ ಜಮೀನನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಸ್ಪತ್ರೆ ಮುಚ್ಚುವುದರ ವಿರುದ್ಧ ಹಸುಗಳ ಮಾಲೀಕ ಕರ್ಣ ಹಾಗೂ ಇತರರು ವಿರೋಧ ವ್ಯಕ್ತಪಡಿಸಿದ್ದರು. ಹಾಗಾಗಿ ಈ ಕೃತ್ಯವೆಸಗಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ನನ್ನ ಎಂಟು ಹಸುಗಳ ಪೈಕಿ ಮೂರು ಹಸುಗಳ ಕೆಚ್ಚಲು ಕೊಯ್ದು, ಮಚ್ಚಿನಿಂದ ಕಾಲುಗಳಿಗೆ ಹೊಡೆದು ಗಾಯಗೊಳಿಸಲಾಗಿದೆ. ಮೂಕ ಪ್ರಾಣಿಗಳು ರಾತ್ರಿಯಿಂದ ನರಳಾಡಿವೆ. ನನ್ನನ್ನು ಸಾಯಿಸುವ ಬದಲು ಮೂಕ ಪ್ರಾಣಿಗಳ ಮೇಲೆ ದಾಳಿ ನಡೆಸಿದ್ದಾರೆ. ನನಗೆ ಹೇಳಿದ್ದರೆ ಈ ಜಾಗವನ್ನೇ ಬಿಟ್ಟು ಹೋಗುತ್ತಿದ್ದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಅವರನ್ನು ಹಿಡಿದು ನಮಗೆ ಒಪ್ಪಿಸಿ, ಬುದ್ಧಿ ಕಲಿಸುತ್ತೇವೆ’ ಎಂದು ಕರ್ಣ ಹೇಳಿದರು.</p>.<p><strong>ಕಣ್ಣೀರಿಟ್ಟ ಸ್ಥಳೀಯರು:</strong></p>.<p>‘ಈ ಪ್ರದೇಶದಲ್ಲಿ ಮಾದಕ ವ್ಯಸನಿಗಳು, ಪುಂಡರ ಹಾವಳಿ ಮಿತಿ ಮೀರುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ವಿಫಲರಾಗಿದ್ದಾರೆ. ಮೂಕ ಪ್ರಾಣಿಗಳ ಮೇಲೆ ವಿಕೃತಿ ಮೆರೆದಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಮೂಕಪ್ರಾಣಿಗಳ ನೋವು ಕಂಡು ಕಣ್ಣೀರಿಟ್ಟರು.</p>.<p>‘ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ. ಘಟನಾ ಸ್ಥಳದಲ್ಲಿ ಎಲ್ಲಿಯೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಸರ್ಕಾರ, ಪೊಲೀಸ್ ಇಲಾಖೆ ಸತ್ತುಹೋಗಿದೆ. ಈ ಪ್ರದೇಶದಲ್ಲಿ ಮಾದಕ ವ್ಯಸನಿಗಳ ಕಾಟ ಮಿತಿಮೀರಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದು ಪಿ.ಸಿ.ಮೋಹನ್ ಆಗ್ರಹಿಸಿದರು.</p>.<p>‘ಒಂದು ಹಸು 20 ಲೀಟರ್ ಹಾಲು ನೀಡುತ್ತಿತ್ತು. ಈಗ ಯಾವುದೇ ಹಸು ಬದುಕುವ ಸ್ಥಿತಿಯಲ್ಲೇ ಇಲ್ಲ. ಹಸು ಮಾಲೀಕರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ನೀಡುತ್ತಿದ್ದೇನೆ. ಸರ್ಕಾರ ಕೂಡ ನೆರವು ನೀಡಬೇಕು’ ಎಂದು ಆರ್.ಅಶೋಕ ಹೇಳಿದರು.<br><br>‘ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p><strong>ಹಸು ಕೊಡಿಸಿದ ಸಚಿವ ಜಮೀರ್</strong></p><p>ಸ್ಥಳೀಯ ಶಾಸಕರೂ ಆಗಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಟನ್ ಪೇಟೆ ಪಶು ಆಸ್ಪತ್ರೆಗೆ ಭೇಟಿ ನೀಡಿ ಹಸುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.</p><p>‘ನೀಡಿದ್ದ ಭರವಸೆಯಂತೆ ಕರ್ಣ ಅವರಿಗೆ ಭಾನುವಾರವೇ ಮೂರು ಹಸುಗಳನ್ನು ಕೊಡಿಸಿದ್ದಾರೆ’ ಎಂದು ಸಚಿವರ ಕಚೇರಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>