<p><strong>ಬೆಂಗಳೂರು:</strong> ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಕೈಗೊಳ್ಳುವ ಭೂಗತ (ಯುಜಿ) ಕೇಬಲ್ ಕಾಮಗಾರಿಯ ನೈಜ ಸಮಯದ ಮಾಹಿತಿ ಪಡೆಯುವುದಕ್ಕಾಗಿ ಅಭಿವೃದ್ಧಿಪಡಿಸಿರುವ ‘ಜಿಐಎಸ್ ಮ್ಯಾಪಿಂಗ್’ ಮೊಬೈಲ್ ಅಪ್ಲಿಕೇಶನ್ ಅನ್ನು ಶನಿವಾರ ಬಿಡುಗಡೆ ಮಾಡಲಾಯಿತು.</p>.<p>ಭೌಗೋಳಿಕ ಮಾಹಿತಿ ವ್ಯವಸ್ಥೆ(ಜಿಐಎಸ್) ಜತೆಗೆ ಸಂಯೋಜಿಸಲಾದ ಈ ಮ್ಯಾಪಿಂಗ್ ಅಪ್ಲಿಕೇಷನ್ ರಾಜ್ಯದಾದ್ಯಂತ ನಡೆಯುವ ಭೂಗತ ಕೇಬಲ್ ಕಾಮಗಾರಿಗಳ ನೈಜ ಸಮಯದ ಮಾಹಿತಿ ಒದಗಿಸಲಿದೆ. ಸಾರ್ವಜನಿಕರು ಈ ಅಪ್ಲಿಕೇಷನ್ನಲ್ಲಿ ಲಭ್ಯವಾಗುವ ಮಾಹಿತಿ ಆಧರಿಸಿ ತಮ್ಮ ದೈನಂದಿನ ಮತ್ತು ದೀರ್ಘಕಾಲದ ಚಟುವಟಿಕೆಗಳಿಗೆ ಸಮಯ ಹೊಂದಾಣಿಕೆ ಮಾಡಿಕೊಳ್ಳಬಹುದು. ಕಾಮಗಾರಿಗಳ ಕುರಿತು ಈ ಅಪ್ಲೀಕೇಷನ್ ಪೂರ್ವಭಾವಿ ಮಾಹಿತಿ ಒದಗಿಸುವುದರಿಂದ ಸಾರ್ವಜನಿಕರಿಗೆ ಆಗುವ ಅನಾನುಕೂಲಗಳು ಕಡಿಮೆಯಾಗಲಿದೆ.</p>.<p>ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ‘ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ತಪ್ಪಿಸಲು ತಂತ್ರಜ್ಞಾನ ಬಳಕೆಗೆ ಆದ್ಯತೆ ನೀಡಿದೆ. ಅದರ ಭಾಗವಾಗಿ ಈ ‘ಜಿಐಎಸ್ ಮ್ಯಾಪಿಂಗ್’ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ' ಎಂದರು.</p>.<p>‘ಜಿಐಎಸ್ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಿರುವ ಈ ಅಪ್ಲೀಕೇಷನ್ನಿಂದ, ಆಂತರಿಕ ದಕ್ಷತೆ ಸುಧಾರಿಸುವುದರ ಜತೆಗೆ ಸಾರ್ವಜನಿಕವಾಗಿ ಪಾರದರ್ಶಕವಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಈ ತಾಂತ್ರಿಕ ವ್ಯವಸ್ಥೆಯು ಕೆಪಿಟಿಸಿಎಲ್ನ ಜಾಲವನ್ನು ಆಧುನೀಕರಿಸುವ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸೇವೆಯನ್ನು ಸುಧಾರಿಸುವ ಕಾರ್ಯತಂತ್ರದ ಭಾಗವಾಗಿದೆ’ ಎಂದು ಹೇಳಿದರು.<br /><br /> ಈ ಸಂದರ್ಭದಲ್ಲಿ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕೆಪಿಟಿಸಿಎಲ್ ಯೋಜನೆಗಳು ವಿಭಾಗದ ನಿರ್ದೇಶಕರಾದ ಎಸ್.ವಿ.ಮಂಜುನಾಥ್, ಮಾಹಿತಿ ತಂತ್ರಜ್ಞಾನ ವಿಭಾಗದ ಸೂಪರಿಂಟೆಂಡ್ ಎಂಜಿನಿಯರ್ ಅನಿಲ್ ಡಿ'ಸೋಜಾ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಕೈಗೊಳ್ಳುವ ಭೂಗತ (ಯುಜಿ) ಕೇಬಲ್ ಕಾಮಗಾರಿಯ ನೈಜ ಸಮಯದ ಮಾಹಿತಿ ಪಡೆಯುವುದಕ್ಕಾಗಿ ಅಭಿವೃದ್ಧಿಪಡಿಸಿರುವ ‘ಜಿಐಎಸ್ ಮ್ಯಾಪಿಂಗ್’ ಮೊಬೈಲ್ ಅಪ್ಲಿಕೇಶನ್ ಅನ್ನು ಶನಿವಾರ ಬಿಡುಗಡೆ ಮಾಡಲಾಯಿತು.</p>.<p>ಭೌಗೋಳಿಕ ಮಾಹಿತಿ ವ್ಯವಸ್ಥೆ(ಜಿಐಎಸ್) ಜತೆಗೆ ಸಂಯೋಜಿಸಲಾದ ಈ ಮ್ಯಾಪಿಂಗ್ ಅಪ್ಲಿಕೇಷನ್ ರಾಜ್ಯದಾದ್ಯಂತ ನಡೆಯುವ ಭೂಗತ ಕೇಬಲ್ ಕಾಮಗಾರಿಗಳ ನೈಜ ಸಮಯದ ಮಾಹಿತಿ ಒದಗಿಸಲಿದೆ. ಸಾರ್ವಜನಿಕರು ಈ ಅಪ್ಲಿಕೇಷನ್ನಲ್ಲಿ ಲಭ್ಯವಾಗುವ ಮಾಹಿತಿ ಆಧರಿಸಿ ತಮ್ಮ ದೈನಂದಿನ ಮತ್ತು ದೀರ್ಘಕಾಲದ ಚಟುವಟಿಕೆಗಳಿಗೆ ಸಮಯ ಹೊಂದಾಣಿಕೆ ಮಾಡಿಕೊಳ್ಳಬಹುದು. ಕಾಮಗಾರಿಗಳ ಕುರಿತು ಈ ಅಪ್ಲೀಕೇಷನ್ ಪೂರ್ವಭಾವಿ ಮಾಹಿತಿ ಒದಗಿಸುವುದರಿಂದ ಸಾರ್ವಜನಿಕರಿಗೆ ಆಗುವ ಅನಾನುಕೂಲಗಳು ಕಡಿಮೆಯಾಗಲಿದೆ.</p>.<p>ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ‘ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ತಪ್ಪಿಸಲು ತಂತ್ರಜ್ಞಾನ ಬಳಕೆಗೆ ಆದ್ಯತೆ ನೀಡಿದೆ. ಅದರ ಭಾಗವಾಗಿ ಈ ‘ಜಿಐಎಸ್ ಮ್ಯಾಪಿಂಗ್’ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ' ಎಂದರು.</p>.<p>‘ಜಿಐಎಸ್ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಿರುವ ಈ ಅಪ್ಲೀಕೇಷನ್ನಿಂದ, ಆಂತರಿಕ ದಕ್ಷತೆ ಸುಧಾರಿಸುವುದರ ಜತೆಗೆ ಸಾರ್ವಜನಿಕವಾಗಿ ಪಾರದರ್ಶಕವಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಈ ತಾಂತ್ರಿಕ ವ್ಯವಸ್ಥೆಯು ಕೆಪಿಟಿಸಿಎಲ್ನ ಜಾಲವನ್ನು ಆಧುನೀಕರಿಸುವ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸೇವೆಯನ್ನು ಸುಧಾರಿಸುವ ಕಾರ್ಯತಂತ್ರದ ಭಾಗವಾಗಿದೆ’ ಎಂದು ಹೇಳಿದರು.<br /><br /> ಈ ಸಂದರ್ಭದಲ್ಲಿ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕೆಪಿಟಿಸಿಎಲ್ ಯೋಜನೆಗಳು ವಿಭಾಗದ ನಿರ್ದೇಶಕರಾದ ಎಸ್.ವಿ.ಮಂಜುನಾಥ್, ಮಾಹಿತಿ ತಂತ್ರಜ್ಞಾನ ವಿಭಾಗದ ಸೂಪರಿಂಟೆಂಡ್ ಎಂಜಿನಿಯರ್ ಅನಿಲ್ ಡಿ'ಸೋಜಾ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>