ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಗಾದಿ ಹಬ್ಬದಂದು ವಜ್ರದ ಆಭರಣ ಕಳವು

Last Updated 5 ಏಪ್ರಿಲ್ 2022, 3:10 IST
ಅಕ್ಷರ ಗಾತ್ರ

ಬೆಂಗಳೂರು: ಕೋರಮಂಗಲ ಠಾಣೆ ವ್ಯಾಪ್ತಿಯ ಉದ್ಯಮಿಯೊಬ್ಬರ ಮನೆಯಲ್ಲಿ ಯುಗಾದಿ ಹಬ್ಬದ ದಿನದಂದು ಕಳ್ಳತನ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

‘ಉದ್ಯಮಿ ರಂಜಿತಾ ಮೆಟ್ರಾನಿ ಎಂಬುವರು ಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೋರಮಂಗಲದ 3ನೇ ಹಂತದಲ್ಲಿ ವಾಸವಿರುವ ಉದ್ಯಮಿ, ಯುಗಾದಿ ಹಬ್ಬದ ಆಚರಣೆಗೆಂದು ತಮಿಳುನಾಡಿನಲ್ಲಿರುವ ಸಂಬಂಧಿಕರ ಮನೆಗೆ ಶನಿವಾರ ಹೋಗಿದ್ದರು. ಭಾನುವಾರ ಸಂಜೆ ವಾಪಸು ಬಂದಿದ್ದರು. ಮನೆಯಲ್ಲಿ ಪರಿಶೀಲನೆ ನಡೆಸಿದಾಗ, ₹ 10 ಲಕ್ಷ ಮೌಲ್ಯದ ವಜ್ರದ ಆಭರಣ ಕಳುವಾಗಿರುವುದು ಗೊತ್ತಾಗಿದೆ’ ಎಂದೂ ತಿಳಿಸಿದರು.

‘ಮನೆಯ ಕಿಟಕಿಯೊಂದರ ಕಬ್ಬಿಣದ ಸರಳುಗಳನ್ನು ಮುರಿಯಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ತಿಳಿದುಕೊಂಡು ಕಳ್ಳರು ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT