ತನಿಖೆ ಆರಂಭಿಸಿದ್ದ ಕೇಂದ್ರ ವಿಭಾಗದ ಪೊಲೀಸರು, ಪತ್ರ ಬರೆದಿದ್ದರು ಎನ್ನಲಾದ ತುಮಕೂರು ಜಿಲ್ಲೆಯ ತಿಪಟೂರಿನ ಲಿಂಗದಹಳ್ಳಿಯ ರಾಜಶೇಖರ್ ಹಾಗೂ ಇತರರನ್ನು ಬಂಧಿಸಿದ್ದರು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ರಾಜಶೇಖರ್, ನಿಗದಿತ ದಿನದೊಳಗೆ ದೋಷಾರೋಪ ಪಟ್ಟಿ ಸಲ್ಲಿಸಿರಲಿಲ್ಲ. ನ್ಯಾಯಾಲಯ ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶವನ್ನೂ ನೀಡಿತ್ತು. ಅಷ್ಟಾದರೂ ಇನ್ಸ್ಪೆಕ್ಟರ್ ದೋಷಾರೋಪ ಪಟ್ಟಿ ಸಲ್ಲಿಸಿರಲಿಲ್ಲ.