<p><strong>ಬೆಂಗಳೂರು:</strong> ಬಿಬಿಎಂಪಿ ಹಾಗೂ ಭಾರತೀಯ ಸೇನೆಯ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ಸಹಯೋಗದಲ್ಲಿ ಹಲಸೂರು ಕೆರೆಯ ಸ್ವಚ್ಛತಾ ಅಭಿಯಾನ ಒಂದು ವಾರದಿಂದ ನಡೆಯುತ್ತಿದೆ. ಇದುವರೆಗೆ 30 ಲೋಡ್ಗಳಷ್ಟು ಕಸ ಹೊರ ತೆಗೆದು ವಿಲೇವಾರಿ ಮಾಡಲಾಗಿದೆ.</p>.<p>113 ಎಕರೆಗಳಷ್ಟು ವಿಸ್ತಾರವಾದ ಹಲಸೂರು ಕೆರೆಯಲ್ಲಿ ಬಿಬಿಎಂಪಿಯ ಕೆರೆಗಳ ನಿರ್ವಹಣೆ ಮಾಡುವ 50 ಸಿಬ್ಬಂದಿ ಹಾಗೂ ಎಂಇಜಿಯ 50 ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಶನಿವಾರ ಬಿಬಿಎಂಪಿಯ 80 ಸಿಬ್ಬಂದಿ ಹಾಗೂ ಎಂಇಜಿಯ 150 ಸಿಬ್ಬಂದಿ ಕೆರೆಯ ಕಸ ಹೊರತೆಗೆದರು. 5 ಬೋಟ್ ಗಳ ಮೂಲಕ ಕಳೆಯನ್ನು ದಡಕ್ಕೆ ತರಲಾಯಿತು. ಇದುವರೆಗೆ 30 ಲೋಡ್ ಕಸ ತೆರವು ಮಾಡಲಾಗಿದೆ.</p>.<p>ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ಬೋಟ್ನಲ್ಲಿ ತೆರಳಿ ಕೆರೆ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದರು. ಸ್ವಚ್ಛತಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಹಲಸೂರು ಕೆರೆಯು ನಗರದ ಆಕರ್ಷಣೀಯ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕಿದೆ. ಸಾರ್ವಜನಿಕರ ವಾಯುವಿಹಾರಕ್ಕೆ ಅನುಕೂಲಕರವಾಗುವಂತೆ ಸೌಕರ್ಯ ಒದಗಿಸಲಾಗುತ್ತದೆ. ಬಿಬಿಎಂಪಿಯ ಮುಂದಿನ ವರ್ಷದ ಬಜೆಟ್ನಲ್ಲಿ ಇದಕ್ಕೆ ಅನುದಾನ ಮೀಸಲಿಡಲಿದ್ದೇವೆ’ ಎಂದರು.</p>.<p>ಬಿಬಿಎಂಪಿ ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್, ಮೋಹನ್ ಕೃಷ್, ‘ಕೆರೆಗೆ ನೀರು ಹರಿದುಬರುವ ತೂಬಿನ ಬಳಿ 100 ಅಡಿ ಉದ್ದದ ಕಸದ ಬೇಲಿ (ತ್ರ್ಯಾಷ್ ಬ್ಯಾರಿಯರ್) ಅಳವಡಿಸಲಾಗಿದೆ. ತೇಲುವ ವಸ್ತುಗಳು ಅಲ್ಲೇ ಸಂಗ್ರಹವಾಗಲಿವೆ. ಅವುಗಳನ್ನು ಆಗಿಂದಾಗ್ಗೆ ತೆರವುಗೊಳಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಹಾಗೂ ಭಾರತೀಯ ಸೇನೆಯ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ಸಹಯೋಗದಲ್ಲಿ ಹಲಸೂರು ಕೆರೆಯ ಸ್ವಚ್ಛತಾ ಅಭಿಯಾನ ಒಂದು ವಾರದಿಂದ ನಡೆಯುತ್ತಿದೆ. ಇದುವರೆಗೆ 30 ಲೋಡ್ಗಳಷ್ಟು ಕಸ ಹೊರ ತೆಗೆದು ವಿಲೇವಾರಿ ಮಾಡಲಾಗಿದೆ.</p>.<p>113 ಎಕರೆಗಳಷ್ಟು ವಿಸ್ತಾರವಾದ ಹಲಸೂರು ಕೆರೆಯಲ್ಲಿ ಬಿಬಿಎಂಪಿಯ ಕೆರೆಗಳ ನಿರ್ವಹಣೆ ಮಾಡುವ 50 ಸಿಬ್ಬಂದಿ ಹಾಗೂ ಎಂಇಜಿಯ 50 ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಶನಿವಾರ ಬಿಬಿಎಂಪಿಯ 80 ಸಿಬ್ಬಂದಿ ಹಾಗೂ ಎಂಇಜಿಯ 150 ಸಿಬ್ಬಂದಿ ಕೆರೆಯ ಕಸ ಹೊರತೆಗೆದರು. 5 ಬೋಟ್ ಗಳ ಮೂಲಕ ಕಳೆಯನ್ನು ದಡಕ್ಕೆ ತರಲಾಯಿತು. ಇದುವರೆಗೆ 30 ಲೋಡ್ ಕಸ ತೆರವು ಮಾಡಲಾಗಿದೆ.</p>.<p>ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ಬೋಟ್ನಲ್ಲಿ ತೆರಳಿ ಕೆರೆ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದರು. ಸ್ವಚ್ಛತಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಹಲಸೂರು ಕೆರೆಯು ನಗರದ ಆಕರ್ಷಣೀಯ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕಿದೆ. ಸಾರ್ವಜನಿಕರ ವಾಯುವಿಹಾರಕ್ಕೆ ಅನುಕೂಲಕರವಾಗುವಂತೆ ಸೌಕರ್ಯ ಒದಗಿಸಲಾಗುತ್ತದೆ. ಬಿಬಿಎಂಪಿಯ ಮುಂದಿನ ವರ್ಷದ ಬಜೆಟ್ನಲ್ಲಿ ಇದಕ್ಕೆ ಅನುದಾನ ಮೀಸಲಿಡಲಿದ್ದೇವೆ’ ಎಂದರು.</p>.<p>ಬಿಬಿಎಂಪಿ ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್, ಮೋಹನ್ ಕೃಷ್, ‘ಕೆರೆಗೆ ನೀರು ಹರಿದುಬರುವ ತೂಬಿನ ಬಳಿ 100 ಅಡಿ ಉದ್ದದ ಕಸದ ಬೇಲಿ (ತ್ರ್ಯಾಷ್ ಬ್ಯಾರಿಯರ್) ಅಳವಡಿಸಲಾಗಿದೆ. ತೇಲುವ ವಸ್ತುಗಳು ಅಲ್ಲೇ ಸಂಗ್ರಹವಾಗಲಿವೆ. ಅವುಗಳನ್ನು ಆಗಿಂದಾಗ್ಗೆ ತೆರವುಗೊಳಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>