<p><strong>ಬೆಂಗಳೂರು:</strong> ಕ್ಷಯರೋಗ ಹಾಗೂ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಜೈಲಿನಲ್ಲೇ ಮೃತಪಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ, ರಾಜ್ಯ ಮಾನವ ಹಕ್ಕುಗಳ ಆಯೋಗ ಮೃತನ ಪಾಲಕರಿಗೆ ₹10ಲಕ್ಷಮಧ್ಯಂತರ ಪರಿಹಾರ ಪಾವತಿಸುವಂತೆ ಸರ್ಕಾರಕ್ಕೆಶಿಫಾರಸುಮಾಡಿದೆ.</p>.<p>ಈ ಕುರಿತಂತೆ ಆಯೋಗದ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಡಿ.ಎಚ್.ವಘೇಲಾ, ಸದಸ್ಯರಾದ ಕೆ.ಬಿ.ಚೆಂಗಪ್ಪ ಹಾಗೂ ಆರ್.ಕೆ.ದತ್ತಾ ಅವರಿದ್ದ ಪೀಠ, ‘ಸಜಾ ಬಂದಿಗಳು ಹಾಗೂ ವಿಚಾರಣಾಧೀನ ಕೈದಿಗಳ ಆರೋಗ್ಯ ರಕ್ಷಣೆಗಾಗಿ ಕೆಲವು ಶಿಫಾರಸುಗಳನ್ನು ಮಾಡಿದ್ದು ಅವುಗಳನ್ನು ತಕ್ಷಣವೇ ಜಾರಿಗೆ ತರುವಂತೆ ಸೂಚಿಸಿದೆ.</p>.<p>ಶಿಫಾರಸುಗಳು:</p>.<p>lಎಲ್ಲ ಕಾರಾಗೃಹ ಅಧಿಕಾರಿಗಳು ಕೈದಿಗಳಿಗೆಸ್ಥಳೀಯ ಆರೋಗ್ಯಾಧಿ ಕಾರಿಗಳಿಂದ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಬೇಕು</p>.<p>lಆರೋಗ್ಯ ಕಾರ್ಡ್ ಸಿದ್ಧಪಡಿಸಬೇಕು.</p>.<p>lಮನೋವೈದ್ಯರಿಂದ ಆಪ್ತ ಸಮಾಲೋಚನೆ ನಡೆಸಬೇಕು. ಮನರಂಜನಾ ಚಟುವಟಿಕೆ ಹಮ್ಮಿಕೊಳ್ಳಬೇಕು. ಜೈಲಿನ ಬ್ಯಾರಕ್ ಮತ್ತು ಹೊರಭಾಗಗಳಲ್ಲಿ ಕ್ರೀಡೆಗಳನ್ನು ಆಯೋಜಿಸಬೇಕು.</p>.<p>l ಓದುವ ಹಾಗೂ ಬರೆಯುವ ಹವ್ಯಾಸ ಉಳ್ಳವರಿಗೆ ಅಗತ್ಯ ಸಾಮಗ್ರಿ ಒದಗಿಸಬೇಕು. ಯೋಗ ಮತ್ತು ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು.</p>.<p>ಪ್ರಕರಣವೇನು?:ಬಾಲಕಿಯನ್ನು ಪ್ರೀತಿಸುತ್ತಿದ್ದ ಆರೋಪದಡಿ ಅರವಿಂದ್ ಕುಮಾರ್ (21) ಎಂಬುವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು 2018 ರ ಜನವರಿಯಲ್ಲಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. 2021ರ ಜನವರಿ 5 ರಂದು ಅರವಿಂದ್ ಕುಮಾರ್ಗೆ ಕ್ಷಯರೋಗ ಮತ್ತು ಮೂತ್ರಪಿಂಡದ ಸಮಸ್ಯೆ ಇರುವುದು ದೃಢಪಟ್ಟಿತ್ತು. ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ 2021ರ ಫೆಬ್ರುವರಿ 4 ರಂದು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕ್ಷಯರೋಗ ಹಾಗೂ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಜೈಲಿನಲ್ಲೇ ಮೃತಪಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ, ರಾಜ್ಯ ಮಾನವ ಹಕ್ಕುಗಳ ಆಯೋಗ ಮೃತನ ಪಾಲಕರಿಗೆ ₹10ಲಕ್ಷಮಧ್ಯಂತರ ಪರಿಹಾರ ಪಾವತಿಸುವಂತೆ ಸರ್ಕಾರಕ್ಕೆಶಿಫಾರಸುಮಾಡಿದೆ.</p>.<p>ಈ ಕುರಿತಂತೆ ಆಯೋಗದ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಡಿ.ಎಚ್.ವಘೇಲಾ, ಸದಸ್ಯರಾದ ಕೆ.ಬಿ.ಚೆಂಗಪ್ಪ ಹಾಗೂ ಆರ್.ಕೆ.ದತ್ತಾ ಅವರಿದ್ದ ಪೀಠ, ‘ಸಜಾ ಬಂದಿಗಳು ಹಾಗೂ ವಿಚಾರಣಾಧೀನ ಕೈದಿಗಳ ಆರೋಗ್ಯ ರಕ್ಷಣೆಗಾಗಿ ಕೆಲವು ಶಿಫಾರಸುಗಳನ್ನು ಮಾಡಿದ್ದು ಅವುಗಳನ್ನು ತಕ್ಷಣವೇ ಜಾರಿಗೆ ತರುವಂತೆ ಸೂಚಿಸಿದೆ.</p>.<p>ಶಿಫಾರಸುಗಳು:</p>.<p>lಎಲ್ಲ ಕಾರಾಗೃಹ ಅಧಿಕಾರಿಗಳು ಕೈದಿಗಳಿಗೆಸ್ಥಳೀಯ ಆರೋಗ್ಯಾಧಿ ಕಾರಿಗಳಿಂದ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಬೇಕು</p>.<p>lಆರೋಗ್ಯ ಕಾರ್ಡ್ ಸಿದ್ಧಪಡಿಸಬೇಕು.</p>.<p>lಮನೋವೈದ್ಯರಿಂದ ಆಪ್ತ ಸಮಾಲೋಚನೆ ನಡೆಸಬೇಕು. ಮನರಂಜನಾ ಚಟುವಟಿಕೆ ಹಮ್ಮಿಕೊಳ್ಳಬೇಕು. ಜೈಲಿನ ಬ್ಯಾರಕ್ ಮತ್ತು ಹೊರಭಾಗಗಳಲ್ಲಿ ಕ್ರೀಡೆಗಳನ್ನು ಆಯೋಜಿಸಬೇಕು.</p>.<p>l ಓದುವ ಹಾಗೂ ಬರೆಯುವ ಹವ್ಯಾಸ ಉಳ್ಳವರಿಗೆ ಅಗತ್ಯ ಸಾಮಗ್ರಿ ಒದಗಿಸಬೇಕು. ಯೋಗ ಮತ್ತು ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು.</p>.<p>ಪ್ರಕರಣವೇನು?:ಬಾಲಕಿಯನ್ನು ಪ್ರೀತಿಸುತ್ತಿದ್ದ ಆರೋಪದಡಿ ಅರವಿಂದ್ ಕುಮಾರ್ (21) ಎಂಬುವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು 2018 ರ ಜನವರಿಯಲ್ಲಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. 2021ರ ಜನವರಿ 5 ರಂದು ಅರವಿಂದ್ ಕುಮಾರ್ಗೆ ಕ್ಷಯರೋಗ ಮತ್ತು ಮೂತ್ರಪಿಂಡದ ಸಮಸ್ಯೆ ಇರುವುದು ದೃಢಪಟ್ಟಿತ್ತು. ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ 2021ರ ಫೆಬ್ರುವರಿ 4 ರಂದು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>