ಆನೇಕಲ್: ತಾಲ್ಲೂಕಿನ ಹುಸ್ಕೂರು ಬಳಿಯ ನಿರ್ಜನ ಪ್ರದೇಶದಲ್ಲಿ ಕಾರೊಂದರಲ್ಲಿ ದಾಖಲೆ ಇಲ್ಲದ ₹10ಲಕ್ಷ ಹೊಂದಿದ್ದ ಇಬ್ಬರನ್ನು ಹೆಬ್ಬಗೋಡಿ ಪೊಲೀಸರು ಶುಕ್ರವಾರ ಬಂಧಿಸಿ, ಹಣವನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಹುಸ್ಕೂರು ಗ್ರಾ.ಪಂ. ಬಿಲ್ ಕಲೆಕ್ಟರ್ ಮಲ್ಲೇಶ್ ಮತ್ತು ನೆಲಮಂಗಲದ ರಾಜೇಶ್ ಬಂಧಿತರು. ಕಾರಿನಲ್ಲಿ ಇಬ್ಬರೂ ಹಣ ಎಣಿಸುತ್ತಿದ್ದರು. ರೌಂಡ್ಸ್ನಲ್ಲಿದ್ದ ಪೊಲೀಸರು ಅನುಮಾನಗೊಂಡು ಪರಿಶೀಲನೆ ನಡೆಸಿ ಹಣದ ಬಗ್ಗೆ ವಿಚಾರಿಸಿದಾಗ ದಾಖಲೆ ನೀಡದ ಹಿನ್ನೆಲೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.