<p><strong>ಬೆಂಗಳೂರು</strong>: ಇಲ್ಲಿನ ಹೆಲ್ತ್ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ನಲ್ಲಿ (ಎಚ್ಸಿಜಿ) ನ್ಯಾಯಯುತವಲ್ಲದ ವೈದ್ಯಕೀಯ ಪ್ರಯೋಗ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಆರೋಗ್ಯ ಇಲಾಖೆ ಆಯುಕ್ತರು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೆ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ. ಎಚ್ಸಿಜಿಯ ಸಾಂಸ್ಥಿಕ ನೀತಿ ಸಮಿತಿಯ ಮಾಜಿ ಮುಖ್ಯಸ್ಥರಾಗಿದ್ದ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರು, ಎಚ್ಸಿಜಿ ಸಂಸ್ಥೆಯಲ್ಲಿ ನಡೆಯುತ್ತಿರುವ ವೈದ್ಯಕೀಯ ಪ್ರಯೋಗಕ್ಕೆ ಸಂಬಂಧಿಸಿದಂತೆ ಆರೋಪಿಸಿದ್ದಾರೆ. </p>.<p>ಎಚ್ಸಿಜಿಯಲ್ಲಿ ರೋಗಿಗಳ ಸುರಕ್ಷತೆ, ದಾಖಲಾತಿ, ವೈದ್ಯಕೀಯ ಪ್ರಯೋಗ ಸೇರಿ ವಿವಿಧ ವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಅಲ್ಲಿನ ಸಾಂಸ್ಥಿಕ ನೀತಿ ಸಮಿತಿ ಅಧ್ಯಕ್ಷರಾಗಿದ್ದವರೇ ಈ ಬಗ್ಗೆ ಆರೋಪಿಸಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ವಿಷಯವು ಗಂಭೀರ ಹಾಗೂ ಕಳವಳಕಾರಿಯಾಗಿದೆ. ಆಸ್ಪತ್ರೆಯಲ್ಲಿ ನಡೆಸಲಾಗುತ್ತಿರುವ ನ್ಯಾಯಯುತವಲ್ಲದ, ವೈದ್ಯಕೀಯ ಪ್ರಯೋಗಗಳ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಲ್ಲಿನ ಹೆಲ್ತ್ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ನಲ್ಲಿ (ಎಚ್ಸಿಜಿ) ನ್ಯಾಯಯುತವಲ್ಲದ ವೈದ್ಯಕೀಯ ಪ್ರಯೋಗ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಆರೋಗ್ಯ ಇಲಾಖೆ ಆಯುಕ್ತರು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೆ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ. ಎಚ್ಸಿಜಿಯ ಸಾಂಸ್ಥಿಕ ನೀತಿ ಸಮಿತಿಯ ಮಾಜಿ ಮುಖ್ಯಸ್ಥರಾಗಿದ್ದ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರು, ಎಚ್ಸಿಜಿ ಸಂಸ್ಥೆಯಲ್ಲಿ ನಡೆಯುತ್ತಿರುವ ವೈದ್ಯಕೀಯ ಪ್ರಯೋಗಕ್ಕೆ ಸಂಬಂಧಿಸಿದಂತೆ ಆರೋಪಿಸಿದ್ದಾರೆ. </p>.<p>ಎಚ್ಸಿಜಿಯಲ್ಲಿ ರೋಗಿಗಳ ಸುರಕ್ಷತೆ, ದಾಖಲಾತಿ, ವೈದ್ಯಕೀಯ ಪ್ರಯೋಗ ಸೇರಿ ವಿವಿಧ ವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಅಲ್ಲಿನ ಸಾಂಸ್ಥಿಕ ನೀತಿ ಸಮಿತಿ ಅಧ್ಯಕ್ಷರಾಗಿದ್ದವರೇ ಈ ಬಗ್ಗೆ ಆರೋಪಿಸಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ವಿಷಯವು ಗಂಭೀರ ಹಾಗೂ ಕಳವಳಕಾರಿಯಾಗಿದೆ. ಆಸ್ಪತ್ರೆಯಲ್ಲಿ ನಡೆಸಲಾಗುತ್ತಿರುವ ನ್ಯಾಯಯುತವಲ್ಲದ, ವೈದ್ಯಕೀಯ ಪ್ರಯೋಗಗಳ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>