ಮಳೆ ಬಂದಾಗ ದರ ಹೆಚ್ಚಳ ಮಾಡುವುದು, ಜನರು ಕಚೇರಿಗೆ, ಕೆಲಸಕ್ಕೆ ತೆರಳುವ ಸಮಯದಲ್ಲಿ ದರ ಹೆಚ್ಚಿಸುವುದು, ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಟ್ಯಾಕ್ಸಿ ಪ್ರಯಾಣ ದರ ಇಳಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಅನೇಕ ದೂರುಗಳು ಬಂದಿದ್ದವು. ಅದನ್ನು ತಪ್ಪಿಸುವುದಕ್ಕಾಗಿ ಏಕರೂಪ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.