<p><strong>ಬೆಂಗಳೂರು:</strong> ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಉನ್ನತ ಶಿಕ್ಷಣದಲ್ಲಿ ಸಂಶೋಧನೆ, ಆವಿಷ್ಕಾರಗಳು ಸಾಕಾರ ವಾಗಲಿದೆ’ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.</p>.<p>ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಗಣಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಹಾಗೂ ಸಂವಹನ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ನವೀನ ಆವಿಷ್ಕಾರಗಳ ಪರಾಮರ್ಶೆ–2020 (ಎರಿಕ್ಸಾ–2020)’ ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿದರು.</p>.<p>‘ಹೆಚ್ಚಿನ ವಿದ್ಯಾರ್ಥಿಗಳು ವಿಷಯ ಗಳನ್ನು ಬಾಯಿಪಾಠ ಮಾಡಿ, ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಸೃಜನ ಶೀಲತೆ ಬೆಳೆಯುವುದಿಲ್ಲ. ಕೃತಕಬುದ್ಧಿಮತ್ತೆ, ರೊಬೊಟ್ ಸೇರಿ ದಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು, ಆವಿಷ್ಕಾರಗಳನ್ನು ಕೈಗೊಳ್ಳಬೇಕು. ಅದರ ಫಲಿತಾಂಶಗಳು ಜನಸಾಮಾನ್ಯರಿಗೆ ಸಹಾಯಕವಾಗ<br />ಬೇಕು’ ಎಂದು ಸಲಹೆ ನೀಡಿರು.</p>.<p>ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್.ಆರ್. ಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಉನ್ನತ ಶಿಕ್ಷಣದಲ್ಲಿ ಸಂಶೋಧನೆ, ಆವಿಷ್ಕಾರಗಳು ಸಾಕಾರ ವಾಗಲಿದೆ’ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.</p>.<p>ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಗಣಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಹಾಗೂ ಸಂವಹನ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ನವೀನ ಆವಿಷ್ಕಾರಗಳ ಪರಾಮರ್ಶೆ–2020 (ಎರಿಕ್ಸಾ–2020)’ ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿದರು.</p>.<p>‘ಹೆಚ್ಚಿನ ವಿದ್ಯಾರ್ಥಿಗಳು ವಿಷಯ ಗಳನ್ನು ಬಾಯಿಪಾಠ ಮಾಡಿ, ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಸೃಜನ ಶೀಲತೆ ಬೆಳೆಯುವುದಿಲ್ಲ. ಕೃತಕಬುದ್ಧಿಮತ್ತೆ, ರೊಬೊಟ್ ಸೇರಿ ದಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು, ಆವಿಷ್ಕಾರಗಳನ್ನು ಕೈಗೊಳ್ಳಬೇಕು. ಅದರ ಫಲಿತಾಂಶಗಳು ಜನಸಾಮಾನ್ಯರಿಗೆ ಸಹಾಯಕವಾಗ<br />ಬೇಕು’ ಎಂದು ಸಲಹೆ ನೀಡಿರು.</p>.<p>ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್.ಆರ್. ಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>