ಬೆಂಗಳೂರು: ಕಸ ನಿರ್ವಹಣೆ, ಬೀದಿ ದೀಪ ನಿರ್ವಹಣೆ, ಕಂದಾಯ, ನಗರ ಯೋಜನೆ, ಕೊಳವೆ ಅಥವಾ ಕೇಬಲ್ ಅಳವಡಿಕೆಗೆ ರಸ್ತೆ ಕತ್ತರಿಸುವಿಕೆ, ಆರೋಗ್ಯ ನಿರ್ವಹಣೆ, ನೀರು ಸರಬರಾಜು ಸೇರಿದಂತೆ ವಿವಿಧ ಸೇವೆಗಳ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸುವಂತೆ ಮೇಯರ್ ಎಂ.ಗೌತಮ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.