<p><strong>ಬೆಂಗಳೂರು</strong>: ವೀರಶೈವ ಲಿಂಗಾಯತ ಏಕತಾ ಸಮಾವೇಶವು ಸರ್ಕಾರದ ವಿರುದ್ಧ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.</p>.<p>ಬೊಮ್ಮಾಯಿ ಯಾವ ಉದ್ದೇಶ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಸೆ.19ರಂದು ಹಮ್ಮಿಕೊಂಡಿರುವ ಈ ಸಮಾವೇಶವು ಯಾವುದೇ ಧರ್ಮ, ಜಾತಿ ಅಥವಾ ಸರ್ಕಾರದ ವಿರುದ್ಧ ಅಲ್ಲ. ನಾವೆಲ್ಲ ಒಂದು ಎಂಬ ಸಂದೇಶವನ್ನು ಸಾರುವುದು ಮತ್ತು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಏನು ಬರೆಯಿಸಬೇಕೆಂಬ ಸ್ಪಷ್ಟ ನಿಲುವು ತಾಳುವುದು ಈ ಸಮಾವೇಶದ ಉದ್ದೇಶ ಎಂದು ಮಹಾಸಭಾದ ಕಾರ್ಯದರ್ಶಿ ಎಚ್.ಎಂ. ರೇಣುಕ ಪ್ರಸನ್ನ ತಿಳಿಸಿದ್ದಾರೆ.</p>.<p>ಸಮಾವೇಶದ ಬಗ್ಗೆ ಕೆಲವರು ಇಲ್ಲಸಲ್ಲದ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿ, ಸಮಾಜದಲ್ಲಿ ಗೊಂದಲವನ್ನು ಉಂಟು ಮಾಡುತ್ತಿರುವುದನ್ನು ಮಹಾಸಭಾ ಖಂಡಿಸುತ್ತದೆ. ಇಂಥ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಸಮಾವೇಶದಲ್ಲಿ ಎಲ್ಲರೂ ಪಾಲ್ಗೊಂಡು ಸಮಾಜದ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೀರಶೈವ ಲಿಂಗಾಯತ ಏಕತಾ ಸಮಾವೇಶವು ಸರ್ಕಾರದ ವಿರುದ್ಧ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.</p>.<p>ಬೊಮ್ಮಾಯಿ ಯಾವ ಉದ್ದೇಶ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಸೆ.19ರಂದು ಹಮ್ಮಿಕೊಂಡಿರುವ ಈ ಸಮಾವೇಶವು ಯಾವುದೇ ಧರ್ಮ, ಜಾತಿ ಅಥವಾ ಸರ್ಕಾರದ ವಿರುದ್ಧ ಅಲ್ಲ. ನಾವೆಲ್ಲ ಒಂದು ಎಂಬ ಸಂದೇಶವನ್ನು ಸಾರುವುದು ಮತ್ತು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಏನು ಬರೆಯಿಸಬೇಕೆಂಬ ಸ್ಪಷ್ಟ ನಿಲುವು ತಾಳುವುದು ಈ ಸಮಾವೇಶದ ಉದ್ದೇಶ ಎಂದು ಮಹಾಸಭಾದ ಕಾರ್ಯದರ್ಶಿ ಎಚ್.ಎಂ. ರೇಣುಕ ಪ್ರಸನ್ನ ತಿಳಿಸಿದ್ದಾರೆ.</p>.<p>ಸಮಾವೇಶದ ಬಗ್ಗೆ ಕೆಲವರು ಇಲ್ಲಸಲ್ಲದ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿ, ಸಮಾಜದಲ್ಲಿ ಗೊಂದಲವನ್ನು ಉಂಟು ಮಾಡುತ್ತಿರುವುದನ್ನು ಮಹಾಸಭಾ ಖಂಡಿಸುತ್ತದೆ. ಇಂಥ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಸಮಾವೇಶದಲ್ಲಿ ಎಲ್ಲರೂ ಪಾಲ್ಗೊಂಡು ಸಮಾಜದ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>